ಮಾಜಿ ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ಬಂದ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲೇ ಇಂದಿರಾ ಕ್ಯಾಂಟಿನ್ ಬಂದ್ ಆಗಿದೆ.

ಟೆಂಡರ್‌ದಾರ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಲು ನಿರ್ಧಾರ ಮಾಡಿಕೊಂಡಿದ್ದಾರೆ.

ಟೆಂಡರ್‌ದಾರ ಸುಮಾರು 6 ತಿಂಗಳ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಿನ ಕೂಸಿಗೆ ಕೊಡಲಿ ಏಟು ಬಿದ್ದಿದೆ.

ನವಾಜ್ ಫಯಾಜ್ ಎಂಬವರು ಕರ್ನಾಟಕದ ಹಲವು ಕ್ಯಾಂಟೀನ್ ಅವರು ತೆಗೆದುಕೊಂಡಿದ್ದಾರೆ. ಹೆಚ್.ಡಿ ಕೋಟೆ, ಟಿ. ನರಸೀಪುರ ಇದು ಎಲ್ಲ ನಮ್ಮ ತಂಡ ಹಾಗೂ ಇಲ್ಲಿನ ಸಿಬ್ಬಂದಿಗೆ ಸಂಬಳ ಸಿಗುತ್ತಿಲ್ಲ. ಸಂಬಳ ಸಿಗದೇ ಹಲವು ಸಿಬ್ಬಂದಿ ಕೆಲಸ ಬಿಟ್ಟಿದ್ದಾರೆ. ಇಲ್ಲಿ ಕೂಡ ಸಿಬ್ಬಂದಿ ಬಿಟ್ಟು ಹೋಗದಂತೆ ನೋಡಿಕೊಂಡಿದ್ದೇನೆ. ಅಲ್ಲದೆ ಸಾಲ ಮಾಡಿ ನಾನೇ ಅವರಿಗೆ ಸಂಬಳ ನೀಡಿದ್ದೇನೆ. ನನ್ನ ಕೈಯಲ್ಲಿ ಆದಷ್ಟು ಮಾಡಿದ್ದೇನೆ. ಆದರೆ ಈಗ ನನ್ನಿಂದ ಆಗುತ್ತಿಲ್ಲ. ಹಾಗಾಗಿ ಕ್ಯಾಂಟೀನ್ ಕ್ಲೋಸ್ ಮಾಡಿದ್ದೇನೆ ಎಂದು ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‍ಗೆ ಬಡವರು, ಗ್ಯಾರೆ ಕೆಲಸ ಮಾಡುವವರು ಬರುತ್ತಿದ್ದರು. ಬಡವರಿಗೆ ಅನುಕೂಲ ಆಗಲಿ ಎಂದು ಕ್ಯಾಂಟೀನ್ ನಡೆಸಲಾಗುತ್ತಿತ್ತು. ಆದರೆ ಈಗ ನನ್ನಿಂದ ಆಗುತ್ತಿಲ್ಲ. ಹಾಗಾಗಿ ಇಂದಿನಿಂದ ಕ್ಯಾಂಟೀನ್ ಕ್ಲೋಸ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *