ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

ಬೆಂಗಳೂರು: ಈಗಲೇ ಕಪ್ ನಮ್ದೇ ಅಂತ ಹೇಳಬೇಡಿ. ಗೆದ್ದ ಮೇಲೆ ಹೇಳೋಣ ಎಂದು ಆರ್‌ಸಿಬಿ (RCB) ಮಾಜಿ ನಾಯಕ ಅನಿಲ್‌ ಕುಂಬ್ಳೆ (Anil Kumble) ಹೇಳಿದ್ದಾರೆ

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‌ಸಿಬಿ ತಂಡ ಚೆನ್ನಾಗಿ ಆಡುತ್ತಿದೆ. ಎರಡು ಬೆಸ್ಟ್‌ ತಂಡಗಳು ಫೈನಲ್‌ ಪ್ರವೇಶಿಸಿವೆ. ನಾನು ಎರಡು ತಂಡವನ್ನು ಪ್ರತಿನಿಧಿಸಿದ್ದೆ. ಆರ್‌ಸಿಬಿ ಗೆಲ್ಲಬೇಕೆಂದು ನಾನು ಹಾರೈಸುತ್ತೇನೆ ಎಂದು ತಿಳಿಸಿದರು.  ಇದನ್ನೂ ಓದಿ: ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

ಕೊಹ್ಲಿ (Virat Kohl) ಉತ್ತಮವಾಗಿ ಆಡುತ್ತಿದ್ದು 600ಕ್ಕೂ ಅಧಿಕ ರನ್‌ ಹೊಡೆದಿದ್ದಾರೆ. ಸಂತೋಷದ ಸುದ್ದಿ ಏನೆಂದರೆ ಈ ಬಾರಿ ಹೊಸ ಐಪಿಎಲ್‌ ವಿನ್ನರ್‌ ಆಗುತ್ತಾರೆ. ಆರ್‌ಸಿಬಿ ಉತ್ತಮವಾಗಿ ಆಡುತ್ತಿದೆ. ಫೈನಲಿನಲ್ಲಿ ಆರ್‌ಸಿಬಿ ಗೆಲ್ಲಬೇಕು ಎಂದರು.