ಬೆಂಗಳೂರು: ನನ್ನ ಪತ್ನಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಆದ್ದರಿಂದ ಸ್ಟೇಡಿಯಂಗೆ ಯಾರೂ ಬರಬೇಡಿ ಎಂದು ಹೇಳಿ ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ನ್ಯಾಷನಲ್ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅವಮಾನ ಮಾಡಿದ್ದಾರೆ.
ಕಂಠೀರವ ಸ್ಟೇಡಿಯಂ ನಿರ್ದೇಶಕ ಅನುಪಮ್ ಅಗರವಾಲ್ ರಾಷ್ಟ್ರೀಯ ಕ್ರೀಡಾಪಟುಗಳ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಸ್ಟೇಡಿಯಂನಲ್ಲಿ ನನ್ನ ಪತ್ನಿ ಪ್ರಾಕ್ಟೀಸ್ ಮಾಡುವ ಸಂದರ್ಭದಲ್ಲಿ ಯಾರೂ ಸ್ಟೇಡಿಯೋ ಒಳಗಡೆ ಇರಬಾರದು ಎಂದು ಹೆಂಡತಿಗೋಸ್ಕರ ಅಥ್ಲೀಟ್ಗಳನ್ನು ಸ್ಟೇಡಿಯಂನಿಂದ ಹೊರ ಹೋಗಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಹೋಂಗಾರ್ಡ್ಗಳನ್ನು ಕರೆದು ಕ್ರೀಡಾಪಟುಗಳನ್ನು ಹೊರ ಹಾಕಿಸಿದ್ದಾರೆ.

ಐಪಿಎಸ್ ಅಧಿಕಾರಿ ಅನುಪಮ್ ಅಗರವಾಲ್ ಅವರ ಪತ್ನಿಪ್ರೇಮಕ್ಕೆ ಕಂಗಾಲಾದ ಅಥ್ಲೀಟ್ಗಳು ಕಂಠೀರವ ಸ್ಟೇಡಿಯಂ ಬಿಟ್ಟು ಕಬ್ಬನ್ ಪಾರ್ಕ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ. ಈ ಎಲ್ಲಾ ಅಥ್ಲೆಟಿಕ್ ಕ್ರೀಡಾಪಟುಗಳು ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ.
ಅನುಪಮ್ ಅಗರವಾಲ್ ಫೋನ್ ಮಾಡಿ ಯಾವುದೇ ಪೆÇಲೀಸ್ ಠಾಣೆಯಲ್ಲೂ ದೂರು ಸ್ವೀಕಾರ ಮಾಡಬೇಡಿ ಅಂತ ಹೇಳಿದ್ದಾರೆ. ಸಂಪಗಿ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ್ದಾರೆ.
https://www.youtube.com/watch?v=sYO07ojfHMg



















Leave a Reply