ಪಾಲಿಕೆ ಚುನಾವಣೆಯ ಅಭ್ಯರ್ಥಿಗಳ ವಿರುದ್ಧ ಮುನಿಸಿಕೊಂಡ್ರಾ ಮಾಜಿ ಸಚಿವ?

ದಾವಣಗೆರೆ: ಪಾಲಿಕೆ ಚುನಾವಣೆಯ ಅಭ್ಯರ್ಥಿಗಳ ವಿರುದ್ಧ ಮುನಿಸಿಕೊಂಡಿದ್ದಾರಾ ಕಾಂಗ್ರೆಸ್ ಮಾಜಿ ಸಚಿವರು ಎನ್ನುವಂತಹ ಪ್ರಶ್ನೆ ಇಲ್ಲಿ ಉದ್ಭವಿಸಿದೆ. ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪ್ರಚಾರಕ್ಕೂ ಸಹ ಬರಲಿಲ್ಲ.

ಇದೇ ತಿಂಗಳ 12ರಂದು ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿದು, ಮನೆ ಮನೆ ಪ್ರಚಾರ ಮುಗಿಯುತ್ತಾ ಬಂದರು ಸಹ ಮಲ್ಲಿಕಾರ್ಜುನ್ ಮಾತ್ರ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಒಂದು ದಿನ ಕೂಡ ಪ್ರಚಾರಕ್ಕೆ ಬರಲಿಲ್ಲ. ಇದರಿಂದ ಪಾಲಿಕೆ ಅಭ್ಯರ್ಥಿಗಳ ವಿರುದ್ಧ ಮುನಿಸಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಸೋಲಿಗೆ ಪಾಲಿಕೆ ಸದಸ್ಯರೇ ಕಾರಣ ಎಂದು ಬಹಿರಂಗವಾಗಿ ಎಸ್‍ಎಸ್‍ಎಂ ಅಭಿಮಾನಿಗಳು ಕಿಡಿಕಾರಿದರು. ಅಲ್ಲದೆ ಸ್ವತಃ ಮಲ್ಲಿಕಾರ್ಜುನ್ ಕೂಡ ಜೊತೆಯಲ್ಲಿ ಇದ್ದ ನಮ್ಮ ಮುಖಂಡರೇ ನಮ್ಮನ್ನು ಸೋಲಿಸಿದ್ದು ಎಂದ ಹಲವು ವೇದಿಕೆ ಕಾರ್ಯಕ್ರಮಗಳಲ್ಲಿ ನೋವನ್ನು ಹೊರಹಾಕಿದ್ದರು. ಎಷ್ಟೇ ಅಭಿವೃದ್ಧಿ ಕೆಲಸ ಮಾಡಿದರೂ ನನ್ನ ಮುಖಂಡರೇ ನಮ್ಮನ್ನು ಸೋಲಿಸಿದರು ಎನ್ನುವ ನೋವಿನಿಂದ ಎಸ್‍ಎಸ್ ಮಲ್ಲಿಕಾರ್ಜುನ್ ಹೊರ ಬರುತ್ತಿಲ್ಲ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.

Comments

Leave a Reply

Your email address will not be published. Required fields are marked *