ಬಿಜೆಪಿ ನಾಯಕರು ಸಿದ್ದೇಶ್ವರ್ ನಿವಾಸದ ಮುಂದೆ ಮೊದಲು ಧರಣಿ ನಡೆಸಲಿ: ಜಾರಕಿಹೊಳಿ

ಬೆಳಗಾವಿ: ಬಿಜೆಪಿ ನಾಯಕರು ಮೊದಲು ದಾವಣಗೆರೆಯ ಸಂಸದ ಸಿದ್ದೇಶ್ವರ್ ಮನೆ ಮುಂದೆ ಧರಣಿ ನಡೆಸಲಿ ಎಂದು ಸಣ್ಣ ಕೈಗಾರಿಕಾ ಮತ್ತು ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಐಟಿ ದಾಳಿಗೆ ಒಳಗಾದ ಕೈ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಐಟಿ ದಾಳಿ ಸಾಮಾನ್ಯ ಪ್ರತಿಕ್ರಿಯೆ. ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಹೀಗಾಗಿ ಬಿಜೆಪಿ ಮುಖಂಡರು ಮೊದಲ ಸಿದ್ದೇಶ್ವರ್ ಮನೆ ಮುಂದೆ ಧರಣಿ ನಡೆಸಲಿ ಎಂದರು.

ನನ್ನ ಮನೆಯಲ್ಲಿ 3 ಲಕ್ಷ ರೂಪಾಯಿಗಿಂತಲೂ ಹೆಚ್ಚಿನ ಹಣ ಸಿಕ್ಕಿದರೆ ರಾಜಕೀಯ ನಿವೃತ್ತಿಗೆ ಸಿದ್ಧ ಎಂದು ಈ ಹಿಂದೆ ಹೇಳಿದ್ದ ಹೇಳಿಕೆಗೆ ಈಗಲೂ ಬದ್ಧ. ಐಟಿ ಇಲಾಖೆ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಇದಕ್ಕೆ ನಾವು ಹೇದರಲ್ಲ ಎಂದು ತಿಳಿಸಿದರು.

10 ಜನ ನರೇಂದ್ರ ಮೋದಿ, 10 ಅಮಿಶ್ ಶಾ ಹಾಗೂ 10 ಯಡಿಯೂರಪ್ಪ ನಂತವರು ಬಂದರೂ ನಾನು ಹೆದರಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾರ್ನಿಂಗ್‍ಗೆ ಫುಲ್ ಆ್ಯಕ್ವೀವ್ ಆಗಿರುವ ಬಿಜೆಪಿ ನಾಯಕರು ಈ ಶುಕ್ರವಾರದಿಂದಲೇ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮುಂದಿನ ಶುಕ್ರವಾರದಿಂದ ಸತತ ಒಂದು ವಾರ ಕಾಲ, ಐಟಿ ದಾಳಿಗೆ ಒಳಗಾದ ಇಂಧನ ಸಚಿವ ಡಿ ಕೆ ಶಿವಕುಮಾರ್, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಪಂಜಿನ ಮೆರವಣಿಗೆ, ಬೈಕ್‍ರ್ಯಾಲಿ ಮೂಲಕ ಜನ ಜಾಗೃತಿ ಮೂಡಿಸುವುದಾಗಿ ಎಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಬಿಎಸ್ ಯಡಿಯೂರಪ್ಪ, ಅಮಿತ್ ಶಾ ಎಡವಟ್ಟು!

ಇದನ್ನೂ ಓದಿ: ಕಾಂಗ್ರೆಸ್ ಅಂಜೋದಕ್ಕೆ ಅಮಿತ್ ಶಾ ದೆವ್ವನೋ, ಭೂತನೋ?: ಉಮಾಶ್ರೀ

Comments

Leave a Reply

Your email address will not be published. Required fields are marked *