ಬೆಳ್ಳಂಬೆಳಗ್ಗೆ ರಾಜ್ಯದ ಉದ್ಯಮಿಗಳಿಗೆ ಐಟಿ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿನೆಸ್‌ಮೆನ್‍ಗಳಿಗೆ ಬಿಸಿ ಮುಟ್ಟಿಸಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ.

ಆದಾಯ ಮರೆಮಾಚಿ ಐಟಿ ರಿಟರ್ನ್ಸ್‌ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಬಿಸಿನೆಸ್‍ಮೆನ್‍ಗಳ ಮನೆ ಹಾಗೂ ಕಚೇರಿಗಳ ಮೇಲೆ 600ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಐಟಿ ರಿಟರ್ನ್ಸ್‌ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವವರನ್ನು ಪತ್ತೆ ಮಾಡಿ ಈ ದಾಳಿ ನಡೆಸಿದ್ದಾರೆ. ಮನೆಗಳ ಮೇಲೆ ಸರ್ಚ್ ವಾರೆಂಟ್ ತಂದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ

ಗೋವಾ – ಕರ್ನಾಟಕ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆಸಿದೆ. ಈಗಾಗಲೇ ಲೆಕ್ಕಪತ್ರಗಳ ಶೋಧನೆ ನಡೆಸುತ್ತಿರುವ ಅಧಿಕಾರಿಗಳು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ನಾಲ್ವರು ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿಯೇ 37 ಕಡೆ ಐಟಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ

Comments

Leave a Reply

Your email address will not be published. Required fields are marked *