ವಿದ್ಯಾಭರಣ್ ಬಗ್ಗೆ ಮೊದಲೇ ಗೊತ್ತಾಗಿದ್ದು ಒಳ್ಳೆಯದಾಯ್ತು: ನಟಿ ವೈಷ್ಣವಿ ಸ್ಪಷ್ಟನೆ

ಗ್ನಿಸಾಕ್ಷಿ ಧಾರಾವಾಹಿಯ ಖ್ಯಾತಿಯ ವೈಷ್ಣವಿ ಗೌಡ ನಿಶ್ಚಿತಾರ್ಥ ಕಾರ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎರಡು ವಾರಗಳ ಹಿಂದೆಯಷ್ಟೇ ನಟ ವಿದ್ಯಾಭರಣ್ ಮತ್ತು ವೈಷ್ಣವಿ ಗೌಡ ಎಂಗೇಜ್ ಆಗಿದ್ದಾರೆ ಎಂದೆಲ್ಲ ಸುದ್ದಿ ಹರಿದಾಡಿತು. ಇಬ್ಬರೂ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮತ್ತು ಸಿಹಿ ತಿನಿಸುತ್ತಿರುವ ವಿಡಿಯೋ ವೈರಲ್ ಕೂಡ ಆಗಿದ್ದವು. ಹಾಗಾಗಿ ಇಬ್ಬರೂ ಒ‍ಪ್ಪಿಕೊಂಡೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಎರಡು ದಿನಗಳ ಹಿಂದೆಯಷ್ಟೆ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ್ದ ವೈಷ್ಣವಿ, ‘ಅದು ನಿಶ್ಚಿತಾರ್ಥವಲ್ಲ. ಹಣ್ಣು ಕಾಯಿ ಇಡುವ ಶಾಸ್ತ್ರ ಮಾತ್ರವಾಗಿದೆ. ಆ ಹುಡುಗನನ್ನು ನಾನು ಇನ್ನೂ ಅರ್ಥ ಮಾಡಿಕೊಳ್ಳಬೇಕು. ಆನಂತರ ನನ್ನ ಒಪ್ಪಿಗೆ ಕುರಿತು ಮಾತನಾಡುತ್ತೇನೆ’ ಎಂದು ಸ್ಪಷ್ಟ ಪಡಿಸಿದ್ದರು. ಆದರೂ, ಹಣ್ಣು ಕಾಯಿ ಇಡುವ ಶಾಸ್ತ್ರದ ಕುರಿತು ರೆಕ್ಕೆಪುಕ್ಕಗಳು ಬೆಳೆದವು. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

ಇಂದು ಮತ್ತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ವೈಷ್ಣವಿ, ‘ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ ನಡೆದಿಲ್ಲ ಅಂತ ನಾನು ಮುಂಚಿನಿಂದಲೂ ಹೇಳ್ತಾ ಬಂದಿದೀನಿ. ಇದನ್ನು ಇಲ್ಲಿಗೇ ಬಿಟ್ಟುಬಿಡಿ. ನಾನು ಈ ಕುರಿತು ಮತ್ತೆ ಮಾತನಾಡಿದ್ರೆ ಬೆಳೆಯುತ್ತಲೇ ಹೋಗುತ್ತದೆ. ಹುಡುಗನ ಕಡೆಯಿಂದ ಇನ್ನೇನೋ ಮಾತು ಬರಬಹುದು. ಅವರು ಹೆಣ್ಣು ನೋಡೋ ಶಾಸ್ತ್ರಕ್ಕೆಂದು ಬಂದು ತಾಂಬೂಲ ಬದಲಾಯಿಸಿಕೊಂಡ್ರು ಅಷ್ಟೇ. ಅದು ನಿಶ್ಚಿತಾರ್ಥ ಅಲ್ಲ’ ಎಂದು  ಮಾತನಾಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮುಂದುವರೆದು ಮಾತನಾಡಿರುವ ನಟಿ ವೈಷ್ಣವಿ ಗೌಡ ‘ನಿಶ್ಚಿತಾರ್ಥ ಆದರೆ ತಾನೇ ಕ್ಯಾನ್ಸಲ್ ಆಗೋದು. ಇದೆಲ್ಲಾ ಒಂದು ವಾರದ ಹಿಂದೆ ಆಗಿದ್ದು. ಬೆಳೆಸಿದಷ್ಟೂ ಎಳೆದುಕೊಳ್ಳುತ್ತೆ. ಬಿಟ್ಟು ಬಿಡೋಣ. ಮಾತಿಗೆ ಮಾತು ಬೇಡ. ನಾನು ಹಾಗೂ ನನ್ನ ಕುಟುಂಬ ಇದನ್ನು ಇಲ್ಲಿಗೇ ಬಿಡುತ್ತಿದ್ದೇವೆ. ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು.ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು ಅಲ್ವೇ?’ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *