ಅಮಾಯಕ ಯುವಕನನ್ನು ಅಪಹರಿಸಿ ಹತ್ಯೆಗೈದ ಉಗ್ರರು

ಕಾಶ್ಮೀರ್: ಯುವಕನನ್ನು ಅಪರಿಸಿ ಬಳಿಕ ಹತ್ಯೆಗೈಯುವ ಮೂಲಕ ಉಗ್ರರು ಮತ್ತೆ ತಮ್ಮ ಕ್ರೌರ್ಯವನ್ನು ಮೆರೆದ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಸೋಫಿಯಾ ಜಿಲ್ಲೆಯ ಸಫ್ನಾಗ್ರಿ ನಿವಾಸಿ ನದೀಮ್ ಮಂಜೂರು ಕೊಲೆಯಾದ ದುರ್ದೈವಿ ಯುವಕ. ಉಗ್ರರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಪುಲ್ವಾಮಾ ಜಿಲ್ಲೆಯ ಕಿಲೋರ್ ಪೊಲೀಸರು ತಿಳಿಸಿದ್ದಾರೆ.

ನದೀಮ್ ಮಂಜೂರುನನ್ನು ಉಗ್ರರು ರಾತ್ರಿ ವೇಳೆ ಅಪಹರಿಸಿದ್ದಾರೆ. ಬಳಿಕ ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನದೀಮ್ ಶವವು ಪುಲ್ವಾಮಾ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಜಮ್ಮು-ಕಾಶ್ಮೀರ ಪೊಲೀಸ್ ವಕ್ತಾರ ಟ್ವೀಟ್ ಮಾಡಿದ್ದು, ಉಗ್ರರು ನದೀಮ್‍ನನ್ನು ಕೊಲೆ ಮಾಡಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಚುರುಕು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *