ಸಿಎಂ ಸಿದ್ದರಾಮಯ್ಯರಿಗೆ ಶನಿ ಹಿಡಿದಿದೆ: ಸರ್ಕಾರದ ವಿರುದ್ಧ ಪೂಜಾರಿ ಕಿಡಿ

ಮಂಗಳೂರು: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಪೂರ್ವ ನಿಯೋಜಿತ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಶನಿ ಹಿಡಿದಿದೆ. ಕಲಬುರ್ಗಿಯವರ ಹತ್ಯೆ ನಡೆದು ಇನ್ನೂ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ. ಈ ನಡುವೆಯೇ ಗೌರಿ ಲಂಕೇಶ್ ಹತ್ಯೆ ನಡೆದಿದೆ ಅಂದ್ರು.

ಒಂದಾದ ಮೇಲೊಂದರಂತೆ ಹತ್ಯೆಗಳು ನಡೆಯುತ್ತಿರೋ ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆ ಏನು ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶ್ನಿಸಿ ಅವರು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಕರಣದ ಕುರಿತು ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಕೆಲಸ ಆಗಬೇಕು. ಆಗ ಮಾತ್ರ ಕೊಲೆಯಾದ ಗೌರಿಯವರ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ ಎಂದು ಅವರು ಹೇಳಿದರು.

Comments

Leave a Reply

Your email address will not be published. Required fields are marked *