ಮಂಡ್ಯ: ಮಂಡ್ಯದ ಲೋಕಸಭಾ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದ ಜೆಡಿಎಸ್ ಶಿವರಾಮೇಗೌಡ ಅವರು ಈ ಐತಿಹಾಸಿಕ ಗೆಲುವು ನಮ್ಮ ನೆಚ್ಚಿನ ನಾಯಕಾರದ ಮಾಜಿ ಪ್ರಧಾನಿ ದೇವೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಐತಿಹಾಸಿಕ ಗೆಲುವು ನಮ್ಮ ನೆಚ್ಚಿನ ನಾಯಕಾರದ ದೇವೇಗೌಡರು, ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಜಿಲ್ಲೆಯ ಎಲ್ಲ ನಾಯಕರಿಗೂ ಸೇರಿದ್ದಾಗಿದೆ. ಚೆಲುವರಾಯಸ್ವಾಮಿ ಆದಿಯಾಗಿ ಎಲ್ಲರ ಶ್ರಮದ ಗೆಲುವು ಇದಾಗಿದೆ. ಇದನ್ನು ಅಂತರ ಎಂದು ನಾವು ಅಂದುಕೊಂಡಿಲ್ಲ. ಎರಡು ಪಕ್ಷಗಳು ಸೇರಿ ಹೆಚ್ಚಿನ ಗೆಲುವು ಬೇಕಿತ್ತು. ಶೇ.75 ರಷ್ಟು ಓಟ್ ಆಗಿದ್ರೆ ಇನ್ನೂ ಅಂತರದ ಗೆಲುವು ಸಿಗುತಿತ್ತು ಎಂದು ಹೇಳಿದರು.

ಈ ಗೆಲುವು ನನ್ನದಲ್ಲ. ನಮ್ಮ ಪಕ್ಷದ್ದು, ಮೈತ್ರಿ ಸರ್ಕಾರದ್ದು, 22 ವರ್ಷದಿಂದ ಅಧಿಕಾರ ಇರಲಿಲ್ಲ. ದೇವರ ಆಶಿರ್ವಾದ ಇರಲಿಲ್ಲ. ನಾಯಕರು ಅಧಿಕಾರ ಇಲ್ಲ ಎಂದು ಟಿಕೆಟ್ ಕೊಡಿಸಿದರು. ಜನರ ಒಲವಿಗೆ ಚ್ಯುತಿ ಆಗದಂತೆ ಕೆಲಸ ಮಾಡುತ್ತೇನೆ. ಈ ಚುನಾವಣೆಗೆ ಮಾತ್ರ ಟಿಕೆಟ್ ಎಂದಿದ್ದಾರೆ. ಮುಂದಿನ ಚುನಾವಣೆಗೆ ಟಿಕೆಟ್ ನೀಡುವ ವಿಚಾರ ವರಿಷ್ಠರಿಗೆ ಬಿಟ್ಟಿದ್ದು, ಸಂಸದರಾಗಿ ಇಡೀ ರಾಜ್ಯ, ದೇಶ ಮಾಡದೇ ಇರುವಂತಹ ಕೆಲಸವನ್ನು ನಮ್ಮ ದೇವೇಗೌಡರು ಮಾಡಿಕೊಂಡು ಬಂದಿದ್ದಾರೆ. ಅವರು ಮುಂದೆ ಹೋದರೆ ಅವರೊಂದಿಗೆ ಬ್ಯಾಗ್ ಹಿಡಿದುಕೊಂಡು ಅವರೊಂದಿಗೆ ಹಿಂದೆ ಹೋಗುತ್ತೇನೆ. ಅವರು ಏನೆಲ್ಲಾ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದಾರೋ ಅವೆಲ್ಲಾ ನಮ್ಮ ಕಾರ್ಯಕ್ರಮ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿ ವಿಚಾರ ಕುರಿತು ಮಾತನಾಡಿದ ಅವರು ಮಂಡ್ಯ ಜನರ ಜ್ವಲಂತ ಸಮಸ್ಯೆ ಬಗೆಹರಿಸಲು ಗಮನ ಹರಿಸುತ್ತೇನೆ. ನಮ್ಮ ಜಿಲ್ಲಾ ಮಂತ್ರಿಗಳೊಂದಿಗೆ ಸೇರಿ ಶಾಸಕರೊಂದಿಗೆ ಸೇರಿ ಜನರ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ದೀಪಾವಳಿ ಹಬ್ಬದಂದು ನೀಡಿದ ಸಿಹಿಯನ್ನು ಅವರ ಸೇವೆಗೆ ಮೀಸಲಿಡುತ್ತೇನೆ. ಪಕ್ಷದ ಮತ್ತು ಮೈತ್ರಿ ಪಕ್ಷದ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ಭರವಸೆಯನ್ನು ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply