ರಾಮನಗರ: ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ಮುಖಂಡರು ಅಧಿಕಾರಿಗಳನ್ನೇ ಮನೆಗೆ ಕರೆಸಿಕೊಂಡು ಸಭೆ ನಡೆಸುವ ಮೂಲಕ ದರ್ಬಾರ್ ನಡೆಸಿದ್ದಾರೆ.
ಚನ್ನಪಟ್ಟಣ ಟೌನ್ನಲ್ಲಿನ ಜೆಡಿಎಸ್ ನಗರ ಘಟಕ ಅಧ್ಯಕ್ಷ ರಾಂಪುರ ರಾಜಣ್ಣ ತಮ್ಮ ಮನೆಗೆ ಅಧಿಕಾರಿಗಳು ಹಾಗೂ ಫುಟ್ಪಾತ್ ವ್ಯಾಪಾರಿಗಳನ್ನು ಮನೆಗೆ ಕರೆಸಿಕೊಂಡು ಮನೆಯಲ್ಲಿಯೇ ಸುಗಮ ಸಂಚಾರಕ್ಕಾಗಿ ಫುಟ್ಪಾತ್ ತೆರವುಗೊಳಿಸಿದ್ದ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ತಹಶೀಲ್ದಾರ್ ಯೋಗಾನಂದ್, ನಗರಸಭಾ ಆಯುಕ್ತ ಪುಟ್ಟಸ್ವಾಮಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳನ್ನು ಕರೆಸಿಕೊಂಡು ಸಭೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ಸಿಎಂ ವಿಶೇಷ ಅಧಿಕಾರಿಗಳಿದ್ದರು ಕೂಡ ಜೆಡಿಎಸ್ ಮುಖಂಡರೇ ಅಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಸಭೆ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶವನ್ನುಂಟು ಮಾಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply