ನಾನು ಕಾಂಗ್ರೆಸ್‍ಗೆ ಸೇರುತ್ತಿರುವುದು ಯಾಕೆ: ಕೇಶವಮೂರ್ತಿ ಉತ್ತರಿಸಿದ್ದು ಹೀಗೆ

ಮೈಸೂರು: ನಾನು ಜನರ ಮತ್ತು ಅಭಿಮಾನಿಗಳ ಆಸೆಯಂತೆ ಕಾಂಗ್ರೆಸ್‍ಗೆ ಸೇರ್ಪಡೆ ಆಗುತ್ತಿದ್ದೇನೆ ಎಂದು ಜೆಡಿಎಸ್ ಪಕ್ಷದ ಮುಖಂಡ ಕಳಲೆ ಕೇಶವಮೂರ್ತಿ ಹೇಳಿದ್ದಾರೆ.

ಇಂದು ಕೇಶವಮೂರ್ತಿ ಆಪ್ತರು ಮತ್ತು ಬೆಂಬಲಿಗರ ಸಭೆ ಕರೆದಿದ್ದರು. ಈ ಸಭೆಯ ನಂತರ ಜೆಡಿಎಸ್ ನಿಂದ ಹೊರ ಬರುತ್ತಿರುವುದಾಗಿ ತಿಳಿಸಿದರು. ಇನ್ನು ಕಲವೇ ದಿನಗಳಲ್ಲಿ ಕೇಶವಮೂರ್ತಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ನಂಜನಗೂಡಿನ ಉಪಚುನಾವಣೆಯಲ್ಲಿ ಕೇಶವಮೂರ್ತಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿ ಆಗುವ ಸಾಧ್ಯತೆಗಳಿವೆ.

ನಾನು ಸ್ವಾಭಿಮಾನದ ಹೆಸರು ಹೇಳಿಕೊಂಡು ಪಕ್ಷಾಂತರ ಮಾಡುವಂತಹ ವ್ಯಕ್ತಿಯಲ್ಲ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು. ನಾನು ನಂಜನಗೂಡಿನಲ್ಲಿ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಿದವನು. ಈಗ ಪಕ್ಷ ತೊರೆಯುವ ಪರಿಸ್ಥಿತಿ ಬಂದೊದಗಿದೆ. ನಾನು ಕಾಂಗ್ರೆಸ್ ಸೇರುವ ಅನಿವಾರ್ಯತೆ ಎದುರಾಗಿದೆ ಎಂದು ಕೇಶವಮೂರ್ತಿ ತಿಳಿಸಿದರು.

ಜೆಡಿಎಸ್ ನಿಂದಲೇ ಸ್ಪರ್ಧಿಸಿದರೆ ರಾಜ್ಯ ಸರ್ಕಾರದ ಹಣ ಬಲ, ತೋಳ್ಬಲದ ಮುಂದೆ ಜಯಿಸುವುದು ಕಷ್ಟವಾಗುತ್ತದೆ. ಇದನ್ನು ದೇವೇಗೌಡರಿಗೆ ಹೇಳಿದ್ದೇನೆ. ಅವರು ನನಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಜೆಡಿಎಸ್ ನಿಂದ ಅಭ್ಯರ್ಥಿ ಹಾಕದೇ ನನ್ನ ಗೆಲುವಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದ್ದರಿಂದಲೇ ನಾನು ಕಾಂಗ್ರೆಸ್ ನತ್ತ ಮುಖ ಮಾಡಿದ್ದೇನೆ ಎಂದು ಹೇಳಿದರು.

 

Comments

Leave a Reply

Your email address will not be published. Required fields are marked *