ಇನ್ನೆರಡು ದಿನಗಳಲ್ಲಿ ಜೆಡಿಎಸ್ ಸಚಿವರಿಗೆ ಅಗ್ನಿ ಪರೀಕ್ಷೆ ಫಿಕ್ಸ್….?

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಸಚಿವರು ಕೇವಲ ಟಿಎ ಮತ್ತು ಡಿಎ ಗೆ ಮಾತ್ರ ಸೀಮಿತರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗುತ್ತಿದ್ದಂತೆ ಜೆಡಿಎಸ್ ಸಚಿವರೆಲ್ಲರು ಫುಲ್ ಆ್ಯಕ್ಟಿವ್ ಆಗಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

ಆಗಸ್ಟ್ 30ಕ್ಕೆ ಸಮ್ಮಿಶ್ರ ಸರ್ಕಾರಕ್ಕೆ ಶತದಿನೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸಂಪುಟದ ಸಚಿವರು ಯಾವ ಕೆಲಸಗಳನ್ನು ಮಾಡಿದ್ದಾರೆ? ಎಷ್ಟು ಸಭೆಗಳನ್ನು ತೆಗೆದುಕೊಂಡಿದ್ದಾರೆ? ಸೇರಿದಂತೆ ಎಲ್ಲ ಜೆಡಿಎಸ್ ಶಾಸಕರ ಕಾರ್ಯವೈಖರಿಯ ವರದಿಯನ್ನು ನೀಡುವಂತೆ ದೇವೇಗೌಡರು ಸೂಚಿಸಿದ್ದಾರೆ ಎನ್ನಲಾಗಿದೆ. ಶತದಿನೋತ್ಸವದ ಬಳಿಕ ಸೆಪ್ಟೆಂಬರ್ ಮೊದಲ ವಾರದಲ್ಲಿ ಸಚಿವರ ಮೌಲ್ಯಮಾಪನ ನಡೆಯಲಿದೆ ಎಂದು ಹೇಳಲಾಗ್ತಿದೆ.

ಸಚಿವರ ಕಾರ್ಯವರದಿ ಪಡೆದ ಬಳಿಕ ದೇವೇಗೌಡರು, ನಾಯಕರು ಎಲ್ಲಿ ತಪ್ಪು ಮಾಡಿದ್ದಾರೆ ಎಂದು ಗುರುತಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವರು ಹೇಗೆ ಕಾರ್ಯನಿರ್ವಹಿಸಬೇಕು ಮತ್ತು ತಮ್ಮ ಇಲಾಖೆಗೆ ಬಿಡುಗಡೆ ಆಗಿರುವ ಅನುದಾನ ಸದುಪಯೋಗ ಮಾಡಿಕೊಳ್ಳಬೇಕೆಂಬುದರ ಬಗ್ಗೆ ತಿಳಿ ಹೇಳಲಿದ್ದಾರೆ. ಹಾಗೆಯೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಸಚಿವರಿಗೆ ದೇವೇಗೌಡರು ಕ್ಲಾಸ್ ತೆಗೆದುಕೊಳ್ಳಲಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಲಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *