ಸಿಎಂಗೆ ಸನ್ಮಾನ ಕಾರ್ಯಕ್ರಮ – ಭರ್ಜರಿ ಬಾಡೂಟದಲ್ಲಿ ನೂಕುನುಗ್ಗಲು

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ, ಕುಮಾರಸ್ವಾಮಿ ಸನ್ಮಾನ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಕೆಲಕಾಲ ನೂಕುನುಗ್ಗಲು ಉಂಟಾಗಿತ್ತು.

ಶನಿವಾರವಷ್ಟೇ ಕೇರಳದಲ್ಲಿ ಸನ್ಮಾನ ಮುಗಿಸಿಕೊಂಡು ಬಂದಿದ್ದ ಸಿಎಂ ಕುಮಾರಸ್ವಾಮಿಗೆ ಇಂದು ಟಿ.ದಾಸರಹಳ್ಳಿ ಜೆಡಿಎಸ್ ಶಾಸಕ ಮಂಜುನಾಥ್ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ನೆಲಮಂಗಲ ಸಮೀಪದ ಮಾದವಾರದಲ್ಲಿನ ನೀಲಕಂಠ ಕನ್ವೆನ್ಷನ್ ಹಾಲ್ ನಲ್ಲಿ ಶಾಸಕ ಮಂಜುನಾಥ್ ಸೇರಿದಂತೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರಿಂದ ಸಿಎಂ ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಯಿತು.

ಸಮಾವೇಶಕ್ಕೆ ಬಂದಿದ್ದ ಸಾವಿರಾರು ಕಾರ್ಯಕರ್ತರಿಗೆ ನಾನಾ ರೀತಿಯ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ವೇಳೆ ಊಟಕ್ಕಾಗಿ ನೂಕು ನುಗ್ಗಲು ಉಂಟಾಗಿ, ಕಾರ್ಯಕರ್ತರು ಪರಿದಾಡಿದ ಪ್ರಸಂಗ ಎದುರಾಗಿತ್ತು. ಇದನ್ನ ಗಮನಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಊಟದ ಹಾಲ್ ಗೆ ಬಂದು ನೂಕಾಟ ತಳ್ಳಾಟ ಮಾಡದಂತೆ ಹೇಳಿ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿ ಅಲ್ಲಿಂದ ತಮ್ಮ ಮುಂದಿನ ಪ್ರಯಾಣವನ್ನ ಮುಂದುವರಿಸಿದರು.

Comments

Leave a Reply

Your email address will not be published. Required fields are marked *