ಎಚ್‍ಡಿಡಿ ಕುಟುಂಬದ ಅಮರನಾಥ ಯಾತ್ರೆ ರದ್ದು

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಅಧಿಕಾರಿ ಹೆಚ್.ಡಿ. ದೇವೇಗೌಡ ಕುಟುಂಬ ಕೈಗೊಳ್ಳಬೇಕಿದ್ದ ಅಮರನಾಥ ಯಾತ್ರೆ ರದ್ದಾಗಿದೆ.

ದೇವೇಗೌಡರು ಬುಧವಾರ ಪತ್ನಿ ಚೆನ್ನಮ್ಮ, ಪುತ್ರ ರೇವಣ್ಣ, ಸೊಸೆ ಭವಾನಿ ಮತ್ತು ಮೊಮ್ಮಕ್ಕಳೊಂದಿಗೆ ಯಾತ್ರೆ ಹೋಗಬೇಕಿತ್ತು. ಆದರೆ ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಯಾತ್ರೆಯನ್ನು ರದ್ದೊಗೊಳಿಸಿದ್ದಾರೆ.

ಪತ್ನಿ ಚೆನ್ನಮ್ಮ ಅವರು ಅಮರನಾಥ ಯಾತ್ರೆ ಮಾಡಬೇಕೆಂಬ ಆಸೆಯನ್ನು ದೇವೇಗೌಡರ ಬಳಿ ವ್ಯಕ್ತಪಡಿದ್ದರು. ಸದಾ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿ ಇರುವ ದೇವೇಗೌಡರು ಪತ್ನಿ ಆಸೆಯನ್ನು ಈಡೇರಿಸಲು ಮುಂದಾಗಿದ್ದರು. ಅದರಂತೆ ದೇವೇಗೌಡರು ಬುಧವಾರ ಬೆಳಗ್ಗೆ ದೆಹಲಿಯಿಂದ ಅಮರನಾಥ ಯಾತ್ರೆ ಮಾಡಲು ನಿರ್ಧರಿಸಿದ್ದರು. ಆದರೆ ಈಗ ಮಳೆಯಿಂದ ಅಮರನಾಥ ಯಾತ್ರೆಯನ್ನು ರದ್ದು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಶೇಷ ಪೂಜೆ: ದೇವೇಗೌಡರ ಕುಟುಂಬದವರು ದೇವರು, ಜ್ಯೋತಿಷ್ಯದ ಮೇಲೆ ಜಾಸ್ತಿ ನಂಬಿಕೆ ಇಟ್ಟಿದ್ದಾರೆ. ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಯ ಬಗ್ಗೆ ಭವಿಷ್ಯವಾಣಿಗಳು ಕೇಳಿ ಬರುತ್ತಿದ್ದಂತೆ ದೇವೇಗೌಡರ ಕುಟುಂಬ ಗ್ರಹಣ ದೋಷ ನಿವಾರಣೆಗಾಗಿ ಮಹಾ ಪೂಜೆ ನಡೆಸಲು ನಿರ್ಧರಿಸಿದೆ. ಸುದೀರ್ಘ ಗ್ರಹಣ ಮುಗಿದ ಬೆಳಗಿನ ಜಾವ ಗ್ರಹಣ ದೋಷ ನಿವಾರಣೆಗಾಗಿ ಗವಿ ಗಂಗಾಧರ ದೇಗುಲದಲ್ಲಿ ಶಿವಾರಾಧನೆ, ಹೋಮ, ಯಜ್ಞ ಯಾಗಗಳನ್ನು ನಡೆಸಲಿದ್ದಾರೆ ಎಂದು ಸೋಮಸುಂದರ ದೀಕ್ಷಿತ್ ಹೇಳಿದ್ದರು.

Comments

Leave a Reply

Your email address will not be published. Required fields are marked *