ಜಿಂದಾಲ್ ಕಂಪನಿಗೆ ಎಚ್ಚರಿಕೆ ನೀಡಿದ ಬಳ್ಳಾರಿ ಜಿಲ್ಲಾಡಳಿತ

ಬಳ್ಳಾರಿ: ಜಿಂದಾಲ್ ಕಂಪನಿಗೆ ನೋಟಿಸ್ ನೀಡುವ ಮೂಲಕ ಹೊರರಾಜ್ಯದ ಕಾರ್ಮಿಕರನ್ನು ಸದ್ಯಕ್ಕೆ ನಿಷೇಧಿಸಿ ಎಂದು ಬಳ್ಳಾರಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ನಗರದ 3ನೇ ಅಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಲು ವಲಸೆ ಕಾರ್ಮಿಕರೇ ಕಾರಣರಾದ ಹಿನ್ನೆಲೆ ಬೆಳ್ಳಂಬೆಳಿಗ್ಗೆ ಜಿಂದಾಲ್ ಕಂಪನಿಗೆ ನೋಟಿಸ್ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಕೊರೊನಾ 3ನೇ ಅಲೆಯ ಈ ವೇಳೆ ಕಳೆದ ಐದು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 500ಕ್ಕೇರಿದೆ. ಇದನ್ನೂ ಓದಿ: ಯುಪಿ ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

100ರ ಅಸುಪಾಸು ಇದ್ದ ಕೊರೊನಾ ಪ್ರಕರಣಗಳು ಕಳೆದ ಐದು ದಿನಗಳಲ್ಲಿ 500ರ ಗಡಿ ತಲುಪಿದೆ.ಇದರಲ್ಲಿ ಜಿಂದಾಲ್ ಕಂಪನಿಯ ಆಸುಪಾಸಿನಲ್ಲಿ ಮತ್ತು ಸಂಡೂರು ತಾಲೂಕಿನಲ್ಲಿ ಹೆಚ್ಚು ಪ್ರಕರಣ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ:  ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ನಗರದ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪತಿಯವರು ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *