ಹೆಚ್‍ಡಿಕೆ ಮನೆಯಲ್ಲಿನ ದೇವಸ್ಥಾನ ಪುಡಿ ಮಾಡಿದ್ರೆ ಸುಮ್ಮನಿರುತ್ತಿದ್ದರಾ?- ಈಶ್ವರಪ್ಪ

Eshwarappa

ಬಾಗಲಕೋಟೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಮನೆಯಲ್ಲಿನ ದೇವಸ್ಥಾನ ಪುಡಿ ಮಾಡಿದರೆ ಸುಮ್ಮನಿರುತ್ತಿದ್ದರಾ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸುವ ಮೂಲಕ ಟಾಂಗ್ ಕೊಟ್ಟರು.

ತಾಂಬೂಲ ಪ್ರಶ್ನೆ ವಿಚಾರವಾಗಿ ರಾಜ್ಯದ ಜನರ ಮೇಲೆ ಮೂಢನಂಬಿಕೆ ಹೇರುತ್ತಿದ್ದಾರೆಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ದೇವೇಗೌಡರ ವಂಶ ನನಗೂ ಒಂದು ಆದರ್ಶ. ದೇವರು, ಧರ್ಮದ ಬಗ್ಗೆ ಆ ವಂಶ ಇಟ್ಟುಕೊಂಡ ನಂಬಿಕೆಯನ್ನು ಎಲ್ಲಾ ಕುಟುಂಬದವರು ಇಟ್ಟುಕೊಳ್ಳಬೇಕು. ರಾಜಕಾರಣಕ್ಕಾಗಿ ಕುಮಾರಸ್ವಾಮಿ ಏನೋ ಒಂದು ಹೇಳಿದರೆ ನಾನು ಟೀಕೆ ಮಾಡಲ್ಲ. ಮಸೀದಿ ರಿಪೇರಿ ಮಾಡೋವಾಗ ದೇವರುಗಳು ಸಿಕ್ಕಿವೆ. ಅದೇ ಚರ್ಚೆ ನಡೆಯುತ್ತಿದೆ ಎಂದರು.

ಕುಮಾರಸ್ವಾಮಿ ತಂದೆ ದೇವೇಗೌಡರು ಒಳ್ಳೆಯ ಕೆಲಸ ಮಾಡಿದ್ದಾರೆ. ದೇವೇಗೌಡರ ಬಗ್ಗೆ ಹೆಚ್ಚು ಟೀಕೆ ಮಾಡೋಕೆ ಹೋಗಲ್ಲ. ದೇವೇಗೌಡರು ಮತ್ತು ಯಡಿಯೂರಪ್ಪ ಅವರು ರಾಜ್ಯದಲ್ಲಿ ಅತಿ ಹೆಚ್ಚು ಪ್ರವಾಸ ಮಾಡಿ ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಇಂದು ರಾಜ್ಯಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ

ಕಾಶಿ, ಮಥುರಾ ಬಗ್ಗೆ ಮೊದಲು ಸರಿಯಾಗಿ ತಿಳಿದುಕೊಳ್ಳಲಿ. ರಾಮಮಂದಿರ ಬಗ್ಗೆ ಟೀಕೆ ಮಾಡಿದರು. ಇವತ್ತಲ್ಲ ನಾಳೆ ಭವ್ಯ ರಾಮಮಂದಿರ ನಿಮಾ9ಣವಾಗುತ್ತೆ. ಅದೇ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ದೇವೇಗೌಡರು ರಾಮಮಂದಿರಕ್ಕೆ ಹೋಗಿ ದರ್ಶನ ಮಾಡೋ ಕಾಲ ದೂರವಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ – ಅನಂತರಾಜು ಜೊತೆಗಿನ ಖಾಸಗಿ ವೀಡಿಯೋ ಇದೆ ಎಂಬ ಗೆಳತಿ ಚಾಟಿಂಗ್ ವೈರಲ್

ಮೊನ್ನೆ ಡಿಕೆ ಶಿವಕುಮಾರ್ ದಂಪತಿ ಸಮೇತ ಕೇದಾರನಾಥ ದೇಗುಲಕ್ಕೆ ಹೋಗಿದ್ದರು ಸಂತೋಷ. ಮುಸ್ಲಿಂ ವೋಟು ಬೇಕು ಟೀಕೆ ಮಾಡಲಿ. ಆದರೆ ತಾನೊಬ್ಬ ಹಿಂದೂ ಅನ್ನೋ ಮನೋಭಾವನೆ ಇದೆಯಲ್ಲಾ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಲ್ಲಿ ಒಳಗಡೆ ದೈವಭಕ್ತಿ ಇದೆ. ಮುಸ್ಲಿಮರ ವೋಟಿಗಾಗಿ ನಾಟಕ ಮಾಡ್ತಿದ್ದಾರೆ ಮಾಡಲಿ ಎಂದರು.

Comments

Leave a Reply

Your email address will not be published. Required fields are marked *