ನಾಳೆ ಬಿಎಸ್‍ವೈ ಬಹುಮತ ಸಾಬೀತು ಪಡಿಸ್ತಾರೆ- ಕೈ ಶಾಸಕ ಅಜಯ್‍ಸಿಂಗ್

– ವಿಪಕ್ಷದಲ್ಲಿ ಕೂರಲು ಕಾಂಗ್ರೆಸ್ ಸಿದ್ಧ

ಕಲಬುರಗಿ: ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದನದಲ್ಲಿ ಬಹುಮತ ಸಾಬೀತು ಪಡಿಸುತ್ತಾರೆ ಎಂದು ಕಾಂಗ್ರೆಸ್ ಜೇವರ್ಗಿ ಶಾಸಕ ಡಾ ಅಜಯ್‍ಸಿಂಗ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈಯಲ್ಲಿರೋ ಅತೃಪ್ತ ಶಾಸಕರು ವಾಪಸ್ ಬರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೀಗಾಗಿ ಸಾಮಾನ್ಯವಾಗಿ ಬಿಜೆಪಿ ಬಹುಮತ ಸಾಬೀತುಪಡಿಸೋದು ಗ್ಯಾರಂಟಿ ಎಂದು ಹೇಳಿದ್ದಾರೆ.

ನಮ್ಮದು ಕಾದು ನೋಡುವ ನೀತಿ. ವಿಪಕ್ಷದಲ್ಲಿ ಕೂರಲು ಕಾಂಗ್ರೆಸ್ ಸಿದ್ಧವಿದೆ ಎಂದರು. ಈ ವೇಳೆ ಅತೃಪ್ತ ಶಾಸಕರ ಬಗ್ಗೆ ಮಾತನಾಡಿ ಅತೃಪ್ತ ಶಾಸಕರು ಮುಂಬೈ ಹೋದಮೇಲೆ ನನ್ನನ್ನು ಸಂಪರ್ಕಿಸಿಲ್ಲ. ಆದರೆ ಮುಂಬೈ ಹೋಗುವಾಗ ನನ್ನ ಜತೆ ಚರ್ಚಿಸಿದ್ದರು ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *