ಬೆಂಗಳೂರು: ತಮಿಳಿನಿಂದಲೇ ಕನ್ನಡ ಹುಟ್ಟಿದೆ ಎಂಬ ಕಮಲ್ ಹಾಸನ್ (Kamal Haasan) ಹೇಳಿಕೆ ಹಾಗೂ ಥಗ್ಲೈಫ್ (ThugLife) ಬಿಡುಗಡೆ ಕುರಿತ ವಿಚಾರಣೆಯನ್ನು ಹೈಕೋರ್ಟ್ ಜೂ.20ಕ್ಕೆ ಮುಂದೂಡಿದೆ.
ಶುಕ್ರವಾರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರು, ಕಮಲ್ ಹಾಸನ್ಗೆ ಕ್ಷಮೆಯಾಚನೆ ಮತ್ತು ವಿವಾದ ಇತ್ಯರ್ಥ ಮಾಡಿಕೊಳ್ಳಲು ಒಂದು ವಾರ ಅವಕಾಶ ಕೋರಲಾಗಿತ್ತು. ಇನ್ನೂ ಕಮಲ್ ಹಾಸನ್ ಕ್ಷಮೆ ಕೇಳಲಿಲ್ವಾ? ಸುಪ್ರೀಂ ಕೋರ್ಟ್ ವಿಚಾರಣೆ ಏನಾಯ್ತು? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕಮಲ್ ಪರ ವಕೀಲರು ಕ್ಷಮೆ ಕೇಳಿಲ್ಲ, ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಅಂದರು.ಇದನ್ನೂ ಓದಿ: ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು
ಇದರ ನಡುವೆ ಕೋರ್ಟ್ಗೆ ತಮ್ಮ ವಾದ ಆಲಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಅರ್ಜಿ ಸಲ್ಲಿಸಿತ್ತು. ಈ ಕುರಿತು ಕಸಾಪ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಬಸವರಾಜ್ ಅವರು, ಕಮಲ ಹಾಸನ್ ಸ್ಟುಪಿಡ್ ಸ್ಟೇಟ್ಮೆಂಟ್ ನೀಡಿದ್ದಾರೆ. ಕರ್ನಾಟಕ, ಕನ್ನಡ ಪದ ಪುರಾಣಗಳಲ್ಲೂ ಬಳಕೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಇದೇ ವೇಳೆ ಕಮಲ್ ಪರ ವಕೀಲರು, ಕಸಾಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸುತ್ತೇವೆ. ಥಗ್ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ವಕೀಲರು ಹೇಳಿದರು.
ಕೊನೆಗೆ ನ್ಯಾ.ನಾಗಪ್ರಸನ್ನ ಅವರು, ವಿವೇಚನೆಯೂ ಶೌರ್ಯದ ಅತ್ಯುತ್ತಮ ಭಾಗ. ವಿವೇಚನೆ ಬಳಸಿ ಎಂದು ಕಮಲ್ ವರ ವಕೀಲರಿಗೆ ತಿಳಿಸಿ ವಿಚಾರಣೆಯನ್ನು ಜೂನ್ 20ಕ್ಕೆ ವಿಚಾರಣೆ ಮುಂದೂಡಿದ್ದಾರೆ.ಇದನ್ನೂ ಓದಿ:ದೇಶದ ಯಾವ್ಯಾವ ವಿಮಾನ ನಿಲ್ದಾಣಗಳು ಅನ್ಸೇಫ್?
