ನೆಲಮಂಗಲ: ಕನ್ನಡ ಪರ ಸಂಘಟನೆಗಳು ‘ತುಕ್ಡೆ ಗ್ಯಾಂಗ್’ ಎಂದ ಸಚಿವ ಸಿ.ಟಿ ರವಿ ವಿರುದ್ಧ ಕನ್ನಡ ಸಂಘಟನೆಗಳು ತಿರುಗಿಬಿದ್ದಿವೆ.
ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಪ್ರವಾಸಿ ಮಂದಿರದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವ ಸಿ.ಟಿ ರವಿ ವಿರುದ್ಧ ಘೋಷಣೆಗಳನ್ನು ಕೂಗಿ ಸಚಿವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಪ್ರತಿಭಟಿದ್ದಾರೆ. ಅಲ್ಲದೆ ಈ ಕೂಡಲೇ ರಾಜೀನಾಮೆ ಕೊಟ್ಟು ಕನ್ನಡ ಸಂಘಟನೆಗಳ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದಾರೆ.

ಕನ್ನಡ ಪರ ಸಂಘಟನೆಗಳು ನಾಡು ನುಡಿ ವಿಚಾರದಲ್ಲಿ ಹಾಗೂ ಜನಸಾಮಾನ್ಯರ ಕುಂದುಕೊರತೆಗಳಿಗೆ ನ್ಯಾಯ ಒದಗಿಸಲು ಸಾಕಷ್ಟು ಹೋರಾಟದ ರೂಪದಲ್ಲಿ ಶ್ರಮಿಸಲಾಗುತ್ತಿದೆ. ಹೀಗಿರುವಾಗ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ಈ ಮಾತಿನಿಂದ ಕನ್ನಡಕ್ಕೆ ಅಪಮಾನವಾಗಿದೆ. ಹೀಗಾಗಿ ಕೂಡಲೇ ಸಚಿವ ಸಿಟಿ.ರವಿಯವರು ರಾಜೀನಾಮೆ ನೀಡಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ನೆಲಮಂಗಲ ತಾಲೂಕು ಕರವೇ ಅಧ್ಯಕ್ಷ ಸುರೇಶ್ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ರೆಹಮಾನ್, ಯಶವಂತ್, ಉಮೇಶ್, ಶ್ರೀನಿವಾಸ್, ರವಿ ಇನ್ನಿತರ ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.

Leave a Reply