ವಿಜಯಪುರ: ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ (Vijayapura) ಮಾಧ್ಯಮದವರೊಂದಿಗೆ ಮಾತನಾಡಿ, ಕನ್ನೇರಿ ಶ್ರೀಗಳು (Kanneri Shri) ಸುಮ್ಮನೇ ಕ್ಷಮೆ ಕೇಳುವುದನ್ನು ಬಿಟ್ಟು ಭಂಡತನ ತೋರಿದ್ದಾರೆ. ಇದು ಸುಮ್ಮನೇ ಪೌರುಷ ತೋರಿಸಲು ಇಷ್ಟೆಲ್ಲಾ ಮಾಡಿದ್ದಾರೆ. ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್ನ ಆರೋಪಿ ಪ್ರದೋಷ್ ತಂದೆ ನಿಧನ – 20 ದಿನ ಮಧ್ಯಂತರ ಜಾಮೀನು ನೀಡಿದ ಕೋರ್ಟ್
ಶ್ರೀಗಳು ಆಡುಭಾಷೆಯಲ್ಲಿ ಮಾತನಾಡಿದ್ದಾರೆ. ಆಡು ಭಾಷೆಯಲ್ಲಿ ಅನೇಕ ಶಬ್ದಗಳು ಬರುತ್ತವೆ. ನಾನು ಹಾಗೇ ಮಾತಾಡಿದ್ರೆ ಏನಾಗುತ್ತೆ. ಅಲ್ಲದೇ ಕನ್ನೇರಿ ಶ್ರೀಗಳಿಗೆ ಜಿಲ್ಲಾಪ್ರವೇಶ ನಿಷೇಧದ ಹಿಂದೆ ನಾನಿಲ್ಲ. ಅದು ಜಿಲ್ಲಾಡಳಿತ ನಿರ್ಧಾರ. ಕನ್ನೇರಿ ಶ್ರೀಗಳು ಸಿದ್ದೇಶ್ವರ ಶ್ರೀಗಳನ್ನು ನೋಡಿ ಕಲಿಯಬೇಕು. ಆಡು ಭಾಷೆಯಲ್ಲೆ ಪ್ರವಚನ ಮಾಡ್ತಿದ್ದರು. ಅವರು ಎಂದಾದರು ಈ ರೀತಿ ಮಾತನಾಡಿದ್ದಾರಾ? ಸಿದ್ದೇಶ್ವರ ಶ್ರೀಗಳು ಲಿಂಗಾಯತ ಧರ್ಮ ಒಂದು ಜಾಗತಿಕ ಧರ್ಮ ಅಂತಾ ಹೇಳಿದ್ದಾರೆ ಎಂದು ಹೇಳಿದ್ದಾರೆ.
