ರಾಮನವಮಿ ವೇಳೆ ಹಿಂಸಾಚಾರ ತಡೆಗಟ್ಟುವಲ್ಲಿ ಕರ್ನಾಟಕ ಸರ್ಕಾರ ಸೋತಿದೆ: ಓವೈಸಿ

OWAISI

ಹೈದರಾಬಾದ್‌: ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರವನ್ನು ತಡೆಗಟ್ಟುವಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯ ಸರ್ಕಾರಗಳು ಸೋತಿವೆ ಎಂದು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ.

RAMANAVAMI

ರಾಮನವಮಿ ಆಚರಣೆ ಸಂದರ್ಭದಲ್ಲಿ ಹಲವು ರಾಜ್ಯಗಳಲ್ಲಿ ಹಿಂಸಾಚಾರಗಳಾಗಿವೆ. ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್‌, ಕರ್ನಾಟಕ, ಗೋವಾ ರಾಜ್ಯಗಳಲ್ಲಿ ಹಿಂಸಾಚಾರ ನಡೆದಿದ್ದು, ಅದನ್ನು ತಡೆಗಟ್ಟುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಅರ್ಹರಲ್ಲ: ನಿರ್ಭಯಾ ತಾಯಿ

ಇದು ಸ್ಪಷ್ಟವಾಗಿ ರಾಜ್ಯಗಳ ಸಹಭಾಗಿತ್ವದ ಹಿಂಸಾಚಾರವಾಗಿದೆ. ಜಿನೆವಾ ಒಪ್ಪಂದದ ಗಂಭೀರ ಉಲ್ಲಂಘನೆಯಾಗಿದೆ ಎಂದು ಓವೈಸಿ ಗಂಭೀರ ಆರೋಪ ಮಾಡಿದ್ದಾರೆ.

ಮಧ್ಯಪ್ರದೇಶ ಸರ್ಕಾರ ಯಾವ ಕಾನೂನಿನ ಅಡಿಯಲ್ಲಿ ಮುಸ್ಲಿಂ ಸಮುದಾಯದ ಮನೆಗಳನ್ನು ನೆಲಸಮ ಮಾಡಿದೆ? ಇದು ಮುಸ್ಲಿಂ ಅಲ್ಪಸಂಖ್ಯಾತರ ಬಗ್ಗೆ ಸಿಎಂ ಅವರ ಪಕ್ಷಪಾತ ಧೋರಣೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಹೆಚ್ಚಿಗೆ ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿ ಕೆನ್ನೆಗೆ ಮುತ್ತು ಕೊಟ್ಟ ಶಿಕ್ಷಕ

Comments

Leave a Reply

Your email address will not be published. Required fields are marked *