ಬಿಜೆಪಿಗೆ ಕಬ್ಬಿಣದ ಕಡಲೆಯಾಗುತ್ತಾ ಕಾಗವಾಡ ಕ್ಷೇತ್ರ?

ಬೆಳಗಾವಿ/ಚಿಕ್ಕೋಡಿ: ಕಾಗವಾಡ ವಿಧಾನಸಭಾ ಕ್ಷೇತ್ರ ಬಿಜೆಪಿಗೆ ಕಬ್ಬಿಣದ ಕಡಲೆಯಾಗುತ್ತಾ ಎಂಬ ಪ್ರಶ್ನೆಯೊಂದು ಕಮಲ ಅಂಗಳದಲ್ಲಿ ಹರಿದಾಡುತ್ತಿದೆ.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಚುನಾವಣೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದ ಅಭ್ಯರ್ಥಿಗಳು ನೆರೆಪೀಡಿತ ಪ್ರದೇಶಗಳಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದರು. ಅದೇ ಪರಿಸ್ಥಿತಿ ಈಗ ಬಿಜೆಪಿ ಪಕ್ಷಕ್ಕೆ ಅದರಲ್ಲೂ ಕಾಗವಾಡ ಮತಕ್ಷೇತ್ರಕ್ಕೆ ಎದುರಾಗಲಿದೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ನೆರೆ ಸಂದರ್ಭದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸಬೇಕಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್, ಮುಂಬೈನಲ್ಲಿ ಬೀಡುಬಿಟ್ಟಿದ್ದರು. ಈಗ ಮತ್ತೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಲಿಂಗಾಯತರ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಬದಲಾವಣೆ ಬಯಸಿ ಬಿಜೆಪಿಯ ಅಭ್ಯರ್ಥಿ ರಾಜುಕಾಗೆ ಅವರನ್ನ ಸೋಲಿಸಿ ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಅವರನ್ನ ಕ್ಷೇತ್ರದ ಜನ ಕಾಂಗ್ರೆಸ್ ಪಕ್ಷದಿಂದ ವಿಧಾನ ಸಭೆಗೆ ಗೆಲ್ಲಿಸಿದ್ದರು. ಇದೀಗ ಬಿಜೆಪಿಯಿಂದ ಶ್ರೀಮಂತ್ ಪಾಟೀಲ್ ಸ್ಪರ್ಧಿಸಿದ್ರೆ, ರಾಜು ಕಾಗೆ ಕಾಂಗ್ರೆಸ್ ನಿಂದ ಸ್ಪರ್ಧಿಸೋದು ಬಹುತೇಕ ಖಚಿತವಾಗಿದೆ. ಉಪಚುನಾವಣೆಯಲ್ಲಿ ನೆರೆಪೀಡಿತ ಕಾಗವಾಡ ಮತ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಗೆಲುವು ಅಷ್ಟು ಸರಳವಾಗಿಲ್ಲ ಎಂಬ ಚರ್ಚೆಗಳು ನಡೆದಿವೆ.

Comments

Leave a Reply

Your email address will not be published. Required fields are marked *