ಕೌರವನ ಬೇಡಿಕೆಗೆ ಕ್ಯಾಬಿನೆಟ್‍ನಲ್ಲಿ ಅಸ್ತು – ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜ್ ಶಿಫ್ಟ್?

ಬೆಂಗಳೂರು: ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರಿಗೆ ಕ್ಯಾಬಿನೆಟ್ ಸಭೆಯಲ್ಲಿ ಗಿಫ್ಟ್ ಮೇಲೆ ಗಿಫ್ಟ್ ಸಿಕ್ಕಿದೆ.

ಹಿರೇಕೆರೂರಿನ ಅನರ್ಹ ಶಾಸಕ ಬಿಸಿ ಪಾಟೀಲ್ ಕ್ಷೇತ್ರದ ರಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಇದಕ್ಕೆ ಬಿ.ಸಿ.ಪಾಟೀಲ್ ಟ್ವಿಟ್ಟರಿನಲ್ಲಿ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲಾಗಿದೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು ಎಂದು ಬಿಸಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಕನಕಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಮಾಡುವ ಚಿಂತನೆ ಮಾಡಲಾಗಿದೆ. ಈ ಬಗ್ಗೆ ಏನು ತೀರ್ಮಾನ ಆಗಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು. ಮೆಡಿಕಲ್ ಕಾಲೇಜು ಶಿಫ್ಟ್ ಬಗ್ಗೆ ಡಿಸಿಎಂ ಅಶ್ವಥನಾರಾಯಣ್ ಪ್ರಸ್ತಾಪ ಮಾಡಿದ್ದಾರೆ. ಆದರೆ ಸಂಪುಟದಿಂದ ನಿರ್ಧಾರ ಆಗಿಲ್ಲ ಎಂದು ತಿಳಿಸಿದರು.

15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ 15 ಅನರ್ಹ ಶಾಸಕರ ಜೊತೆ ಸಭೆ ಶೀಘ್ರದಲ್ಲೇ ನಡೆಸಲು ಸಿಎಂ ನಿರ್ಧಾರ ಮಾಡಿದ್ದಾರೆ. ಉಪಚುನಾವಣೆಗಳಿಗೆ ಅನರ್ಹರಿಗೆ ಟಿಕೆಟ್ ಕೊಡುವ ವಿಚಾರ, ಸ್ಥಳೀಯ ಬಿಜೆಪಿಗರ ವಿರೋಧ ಸಂಬಂಧ ಚರ್ಚೆ ನಡೆಸಲಿದ್ದು ಅನರ್ಹರಿಗೆ ಟಿಕೆಟ್ ಭರವಸೆ ಕೊಡಲಿದ್ದಾರೆ ಎನ್ನಲಾಗಿದೆ.

ಸುಪ್ರೀಂಕೋರ್ಟ್ ವಿಚಾರಣೆ ಅಕ್ಟೋಬರ್ 22ಕ್ಕೆ ಇದೆ ಈ ಹಿನ್ನೆಲೆ ಕೋರ್ಟ್ ನಿಲುವು ನೋಡಿಕೊಂಡು ಮುಂದುವರಿಯಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.

Comments

Leave a Reply

Your email address will not be published. Required fields are marked *