ಅಜ್ಞಾತ ಸ್ಥಳದಲ್ಲಿ ಸಿಎಂ ಬೊಮ್ಮಾಯಿ ಕಡತ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಸೇರಿ ಸಚಿವರ ಸಾಧನೆಯ ಮೌಲ್ಯಮಾಪನಕ್ಕೆ ಹೈಕಮಾಂಡ್ ಮುಂದಾದ ಬೆನ್ನಲ್ಲೇ, ಮುಖ್ಯಮಂತ್ರಿಗಳು ತಮ್ಮದೇ ಸಾಧನೆಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ತಾವು ಸಿಎಂ ಆದ ದಿನದಿಂದ ಹೊರಡಿಸಿರುವ ಸರ್ಕಾರಿ ಆದೇಶಗಳ ವಿವರಗಳನ್ನು ಅಜ್ಞಾತ ಸ್ಥಳದಲ್ಲಿ ಕುಳಿತು ಬಸವರಾಜ ಬೊಮ್ಮಾಯಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ: ಸುಧಾಕರ್‌

ತಮ್ಮ ಬೆಂಗಾವಲು ಪಡೆಯನ್ನು ಬಿಟ್ಟು, ತಮ್ಮ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜೊತೆ ಕಡತ ವಿಲೇವಾರಿ ಮತ್ತು ಆದೇಶಗಳನ್ನು ರೀ ಚೆಕ್ ಮಾಡ್ತಿದ್ದಾರೆ. ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ಆಗಬಹುದು ಎಂಬ ಸುದ್ದಿಯ ಬೆನ್ನಲ್ಲೇ ಮುಖ್ಯಮಂತ್ರಿಗಳು ಈಗ ಕಡತ ವಿಲೇವಾರಿಯಲ್ಲಿ ಫುಲ್‌ ಬ್ಯುಸಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *