ಡಿಕೆಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ: ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರು. ಸಿದ್ದರಾಮಯ್ಯನವರು ಪ್ರಭಾವಿ ನಾಯಕರು. ಎಲ್ಲರ ಸಮ್ಮುಖದಲ್ಲಿಯೇ ಪಕ್ಷ ಮುನ್ನಡೆಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆ ಎಂದ ಮೇಲೆ ಕೆಲವರಲ್ಲಿ ವೈಮನಸ್ಸು ಇರುವುದು ಸಹಜ. ಚುನಾವಣೆ ಸಂದರ್ಭದಲ್ಲಿ ಟಿಕೆಟ್‍ಗಾಗಿ ಗುಂಪುಗಾರಿಕೆ ನಡೆಯುತ್ತದೆ. ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ್ ಬಣ ಇರುವುದು ಸತ್ಯ. ಆದರೆ ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತೇವೆ ಎಂದರು.

ಎಲ್ಲರ ಬಹುದಿನಗಳ ಕಾತುರತೆಯಿತ್ತು. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಚರ್ಚೆ ನಡೆಯುತ್ತಿತ್ತು. ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ ಒಬ್ಬ ಅಧ್ಯಕ್ಷ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರ ನೇಮಕ ಮಾಡಿದೆ. ಹುದ್ದೆಗೆ ಸಹಕಾರ ನೀಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ನವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಇಗೀನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿ ಉತ್ಸಾಹ ಇದೆ. ಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೂವರು ಕಾರ್ಯಾಧ್ಯಕ್ಷರು ಕೆಪಿಸಿಸಿ ಅಧ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿಗೆ ನೀಡಬೇಕೆಂಬ ಆಸೆ ನಮಗೂ ಇದೆ. ಇನ್ನೂ ಒಂದು ಹುದ್ದೆ ಖಾಲಿ ಇದೆ. ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದರು ತಿಳಿಸಿದರು.

ಬೆಳಗಾವಿಯಲ್ಲಿ ಗೋಕಾಕ್ ಸೇರಿದಂತೆ ಮೂರು ಕ್ಷೇತ್ರ ಕಾಂಗ್ರೆಸ್ ವಂಚಿತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಡೆ ಮುಖಮಾಡಿದ್ದಾರೆ. ಆದರಿಂದ ಯಾವುದೇ ನಷ್ಟವಾಗಿಲ್ಲ. ಉಪಚುನಾವಣೆಯಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಇನ್ನೂ ಮೂರು ವರ್ಷ ಕಾಲಾವಕಾಶವಿದೆ. ಪಕ್ಷ ಬಲಪಡಿಸುವ ತಂತ್ರ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊರೊನಾ ವೈರಸ್ ತಡೆಗಟ್ಟುವ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸುವುದು ಸೂಕ್ತ. ಮುಂದೆ ಅವಘಡವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಮುಖಂಡ ವೀರಕುಮಾರ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *