ರಾಜ್ಯದ ಹವಾಮಾನ ವರದಿ: 06-10-2021

Karnataka weather report

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ 2 ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವ ಇದ್ದು ಆ ಕಾರಣದಿಂದ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ 8% ಮಳೆ ಕೊರತೆಯೊಂದಿಗೆ ಮುಂಗಾರು ಅವದಿಅಂತ್ಯವಾಗುತ್ತಿದೆ ಎಂಬ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಆಗಸ್ಟ್ ತಿಂಗಳಿನಲ್ಲಿ 47% ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 8% ಮಳೆ ಕೊರತೆಯಾಗಿದೆ ಎಂದು ಹೇಳಲಾಗುತ್ತಿದೆ.


ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 25-20
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 29-21
ಮೈಸೂರು: 27-21

ಮಂಡ್ಯ: 27-21
ರಾಮನಗರ: 27-21
ಮಡಿಕೇರಿ: 23-17
ಹಾಸನ: 26-19
ಚಾಮರಾಜನಗರ: 27-21

rain

ಚಿಕ್ಕಬಳ್ಳಾಪುರ: 24-19
ಕೋಲಾರ: 26-21
ತುಮಕೂರು: 26-21
ಉಡುಪಿ: 29-24
ಕಾರವಾರ: 31-26

ಚಿಕ್ಕಮಗಳೂರು: 25-19
ದಾವಣಗೆರೆ: 29-22
ಚಿತ್ರದುರ್ಗ: 28-21
ಹಾವೇರಿ: 30-22
ಬಳ್ಳಾರಿ: 30-23


ಗದಗ: 30-22
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 31-23

rain

ವಿಜಯಪುರ: 31-23
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 32-23

Comments

Leave a Reply

Your email address will not be published. Required fields are marked *