ಮುಂದಿನ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 29-24
ಶಿವಮೊಗ್ಗ: 26-21
ಬೆಳಗಾವಿ: 27-21
ಮೈಸೂರು: 27-21

ಮಂಡ್ಯ: 27-21
ಮಡಿಕೇರಿ: 24-19
ರಾಮನಗರ: 28-21
ಹಾಸನ: 25-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 26-20

ಕೋಲಾರ: 27-21
ತುಮಕೂರು: 26-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 24-18
ದಾವಣಗೆರೆ: 28-22

ಹುಬ್ಬಳ್ಳಿ: 27-21
ಚಿತ್ರದುರ್ಗ: 27-21
ಹಾವೇರಿ: 29-21
ಬಳ್ಳಾರಿ: 29-23
ಗದಗ: 27-22
ಕೊಪ್ಪಳ: 27-22

ರಾಯಚೂರು: 28-24
ಯಾದಗಿರಿ: 28-23
ವಿಜಯಪುರ: 28-23
ಬೀದರ್: 29-23
ಕಲಬುರಗಿ: 29-23
ಬಾಗಲಕೋಟೆ: 27-23
