ಮುಸ್ಲಿಮರ ಬಗ್ಗೆ ಮಾತಾಡಿದ್ರೆ ಎತ್ತಿಬಿಡ್ತೀವಿ- ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಬೆದರಿಕೆ

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆಯವರಿಗೆ ಇಂದು ಜೀವ ಬೆದರಿಕೆ ಕರೆಯೊಂದು ಬಂದಿದೆ.

ಇಂದು ಮುಂಜಾನೆ 1:45ಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಮನೆಯ ಸ್ಥಿರ ದೂರವಾಣಿಗೆ ಅನಾಮಧೇಯ ವ್ಯಕ್ತಿಗಳು ಕರೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಅನಂತ್ ಕುಮಾರ್ ಹೆಗ್ಡೆ ಪತ್ನಿ ರೂಪ ಹೆಗ್ಡೆ ಅವರು ಕರೆ ಸ್ವೀಕರಿಸಿದ್ದಾರೆ.

ಈ ವೇಳೆ ಮಾತನಾಡಿದ ಅನಾಮಿಕ, ಮುಸಲ್ಮಾನರ ಬಗ್ಗೆ ಮಾತನಾಡಿದರೆ ಚೆನ್ನಾಗಿರುವುದಿಲ್ಲ, ನಿಮ್ಮ ಇಡೀ ಕುಟುಂಬವನ್ನು ನೋಡಿಕೊಳ್ಳುತ್ತೇವೆ. ಅನಂತ್ ಕುಮಾರ್ ಹಾಗೂ ನಿಮ್ಮನ್ನು ಜೀವಸಹಿತ ಬಿಡುವುದಿಲ್ಲ. ನಮಗೆ ಏನು ಮಾಡಬೇಕು ಎಂದು ಗೊತ್ತಿದೆ ಎಂದು ಹೇಳಿದ್ದಾನೆ.

ಅಲ್ಲದೆ ಅಯೋಧ್ಯೆ ವಿಷಯ ನಿಮಗೆ ಬೇಕಾ? ಅಯೋಧ್ಯೆಯನ್ನು ತೆಗೆದುಕೊಳ್ಳಲು ಬಿಡುವುದಿಲ್ಲ. ನಿಮ್ಮ ಪಾಡಿಗೆ ನಿಮ್ಮ ಕೆಲಸ ಮಾಡಿ ಎಂದು ಬೆದರಿಕೆ ಹಾಕಲಾಗಿದೆ. ಘಟನೆ ಸಂಬಂಧ ಹೆಗ್ಡೆಯವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಇಂದು ಶಿರಸಿಯ ಹೊಸಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *