PFI ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ – 18 ಮಂದಿ ಅರೆಸ್ಟ್

ತಿರುವನಂತಪುರಂ: ಪಿಎಫ್‍ಐ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶುಕ್ರವಾರ 18 ಮಂದಿಯನ್ನು ಬಂಧಿಸಿದ್ದಾರೆ.

ಕೇರಳದ ಆಲಪ್ಪುಳದಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರ್‍ಯಾಲಿ ವೇಳೆ ಅಪ್ರಾಪ್ತ ಬಾಲಕನೊಬ್ಬ ಪ್ರಚೋದನಕಾರಿ ಘೋಷಣೆಯನ್ನು ಕೂಗಿದ್ದನು. ಈ ಘೋಷಣೆಯನ್ನು ಪುನರುಚ್ಚಿಸಿದ್ದವರನ್ನು ಇಬ್ಬರನ್ನು ಈ ಮುನ್ನ ಪೊಲೀಸರು ಬಂಧಿಸಿದ್ದರು. ಅಲ್ಲದೇ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇರಳ ಹೈಕೋರ್ಟ್ ಪೊಲೀಸರಿಗೆ ಸೂಚಿಸಿತ್ತು. ಇದನ್ನೂ ಓದಿ: ಸಾಕ್ಷ್ಯಾಧಾರಗಳ ಕೊರತೆ- ಆರ್ಯನ್ ಖಾನ್ ಸೇರಿ 6 ಮಂದಿಗೆ ಎನ್‍ಸಿಬಿ ಕ್ಲೀನ್‌ಚಿಟ್

crime

ಮೇ 21ರಂದು ನಗರದಲ್ಲಿ ನಡೆದ ಪಿಎಫ್‍ಐ ಗಣರಾಜ್ಯ ಉಳಿಸಿ ರ್‍ಯಾಲಿ ವೇಳೆ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕನನ್ನು ಹೆಗಲ ಮೇಲೆ ಕುರಿಸಿಕೊಂಡಿದ್ದನು. ಈ ವೇಳೆ ಬಾಲಕ, ಹಿಂದೂಗಳು ಅಂತ್ಯಕ್ರಿಯೆ ವೇಳೆ ಅಕ್ಕಿ ಇಡಬೇಕು ಮತ್ತು ಕ್ರಿಶ್ಚಿಯನ್ನರು ಅವರ ಅಂತ್ಯಕ್ರಿಯೆ ವೇಳೆ ಧೂಪ ಹಾಕಬೇಕು. ನೀವು ಮಾರ್ಯದೆಯಿಂದ ಬದುಕುವುದಾದರೆ, ನಮ್ಮ ನೆಲದಲ್ಲಿ ಬದುಕಬಹುದು. ನೀವು ಯೋಗ್ಯವಾಗಿ ಬದುಕದಿದ್ದರೆ, ನಮಗೂ ಆಜಾದಿ (ಸ್ವಾತಂತ್ರ್ಯ) ತಿಳಿದಿದೆ ಎಂಬ ಪ್ರಚೋದನಾಕಾರಿ ಘೋಷಣೆ ಕೂಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿಂದು ವ್ಯತ್ಯಯ

police (1)

ಕೇರಳದಲ್ಲಿ ವಾಸಿಸುವ ಹಿಂದೂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಗೆ ಇದು ನೇರವಾಗಿ ಎಚ್ಚರಿಕೆ ನೀಡಿದಂತೆ ಆಗಿದೆ. ಸದ್ಯ ಈ ಸಂಬಂಧ ಜಿಲ್ಲಾಧ್ಯಕ್ಷ ನವಾಸ್ ವಂದನಂ ಮತ್ತು ಜಿಲ್ಲಾ ಕಾರ್ಯದರ್ಶಿ ಮುಜೀಬ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153 ಎ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *