ಬಿಗ್ ನ್ಯೂಸ್ ಜೊತೆ ಸಿಹಿ ಸುದ್ದಿ ಕೊಟ್ಟ ಕೆಜಿಎಫ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ -2’ ಚಿತ್ರತಂಡ ಇಂದು ಬಿಗ್ ನ್ಯೂಸ್ ಕೊಡುವುವಾಗಿ ಹೇಳಿತ್ತು. ಅದರಂತೆಯೇ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಮತ್ತೊಂದು ಸಿಹಿ ಸುದ್ದಿ ನೀಡುವುದಾಗಿ ಅಭಿಮಾನಿಗಳಿಗೆ ತಿಳಿಸಿದೆ.

ಹೊಂಬಾಳೆ ಫಿಲಂಸ್ ತನ್ನ ಟ್ವಿಟ್ಟರ್ ‘ಕೆಜಿಎಫ್ ಚಾಪ್ಟರ್-2’ ಸಿನಿಮಾದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿ ಮತ್ತೊಂದು ಬಿಗ್ ನ್ಯೂಸ್‍ಗೆ ಕಾಯುವಂತೆ ಅಭಿಮಾನಿಗಳಿಗೆ ತಿಳಿಸಿದೆ. ಇಂದು ಕೆಜಿಎಫ್ ಸಿನಿಮಾ ಪೋಸ್ಟರ್ ರಿಲೀಸ್ ಮಾಡಿದೆ. ಅದರಲ್ಲಿ ಎರಡು ಕೈಗಳನ್ನು ಹಿಂದೆ ಹಿಡಿದಿರುವ ಅಧೀರನ ಪೋಸ್ಟರ್ ಆಗಿದೆ. ಜುಲೈ 29ಕ್ಕೆ ಚಿತ್ರದ ಪ್ರಮುಖ ಪಾತ್ರಧಾರಿ ಅಧೀರನ ಪೋಸ್ಟರ್ ರಿಲೀಸ್ ಮಾಡುವುದಾಗಿ ತಿಳಿಸಿದೆ.

ಯಾರು ಈ ಅಧೀರ?
ಕೆಜಿಎಫ್ ಸಿನಿಮಾದಲ್ಲಿ ಖಳನಾಯಕ ಸೂರ್ಯವರ್ಧನ್ ಬರುತ್ತಾನೆ. ಆತನ ಸಹೋದರನೇ ಅಧೀರ. ಆದರೆ ಮೊದಲ ಭಾಗದಲ್ಲಿ ಅಧೀರನ ಪಾತ್ರ ಕೆಲವೇ ನಿಮಿಷವಿತ್ತು. ಅಷ್ಟೇ ಅಲ್ಲದೇ ಆತನ ಮುಖವನ್ನು ತೋರಿಸಿರಲಿಲ್ಲ. ಸೂರ್ಯವರ್ಧನ್ ಸಾವಿನ ನಂತರ ಗರುಡ ಅಧಿಕಾರಕ್ಕೆ ಬರುತ್ತಾನೆ. ಆಗ ರಾಕಿ ಭಾಯ್‍ಗೆ ಸುಪಾರಿ ಕೊಟ್ಟು ಗರುಡನನ್ನು ಕೊಲೆ ಮಾಡಿಸಿದ್ದನು. ಇದೀಗ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದಲ್ಲಿ ಅಧೀರ ಬರುತ್ತಾನೆ. ಅಧೀರನ ಪಾತ್ರಧಾರಿಯ ಪೋಸ್ಟರನ್ನು ಜುಲೈ 29ಕ್ಕೆ ಚಿತ್ರತಂಡ ರಿಲೀಸ್ ಮಾಡಲಿದೆ.

ಅಧೀರನ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಈಗಾಗಲೇ ‘ಕೆಜಿಎಫ್ ಚಾಪ್ಟರ್-2’ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಅಭಿನಯಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಹೀಗಾಗಿ ಅಧೀರನ ಪಾತ್ರದಲ್ಲಿ ಸಂಜಯ್ ದತ್ ಅಭಿನಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾಕೆಂದರೆ ಚಿತ್ರತಂಡ ಜುಲೈ 29ಕ್ಕೆ ಅಧೀರನ ಪೋಸ್ಟರ್ ರಿಲೀಸ್ ಮಾಡುವುದಾಗಿ ತಿಳಿಸಿದೆ. ಅಂದೇ ಸಂಜಯ್ ದತ್ ಹುಟ್ಟುಹಬ್ಬವಿದೆ. ಹೀಗಾಗಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕೆಜಿಎಫ್ ಚಿತ್ರತಂಡ ಗಿಫ್ಟ್ ನೀಡುತ್ತಿದೆ ಎನ್ನಲಾಗಿದೆ. ಸದ್ಯಕ್ಕೆ ಸಿನಿಮಾ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

Comments

Leave a Reply

Your email address will not be published. Required fields are marked *