ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಪೊಲೀಸರ ಬಲೆಗೆ

ಹೊಸಕೋಟೆ(ಬೆಂಗಳೂರು): ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳನ್ನು ಬೆಂಗಳೂರು ಪೂರ್ವ ತಾಲೂಕಿನ ಅವಲಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಿಶಾಂತ್(25), ಸಂತೋಷ್ (24) ,ಮತ್ತು ನವೀನ್(23) ಬಂಧಿತರಾಗಿದ್ದಾರೆ. ಪೊಲೀಸರು ಅಪರಣವಾಗಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಗಂಡನ ವೀರ್ಯವನ್ನು ಕೇಕ್‍ನಲ್ಲಿ ಮಿಕ್ಸ್ ಮಾಡಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಶಿಕ್ಷಕಿಗೆ 40 ವರ್ಷ ಜೈಲು

ಮಂಗಳವಾರ ಕುರುಡು ಸೊಣ್ಣೇನಹಳ್ಳಿ ಗ್ರಾಮದ ಅಲೆಕ್ಸಾಂಡರ್ (50)ನನ್ನು, ಆರೋಪಿಗಳು ಅಪರಣ ಮಾಡಿ ಹೆಂಡತಿ ರತ್ನಮ್ಮಗೆ ದೂರವಾಣಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ರತ್ನಮ್ಮ ಕೂಡಲೇ ಸ್ಥಳೀಯ ಅವಲಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಬೆಂಗಳೂರಿನ ಕೋರಮಂಗಲದ ಖಾಸಗಿ ಲಾಡ್ಜಿನಲ್ಲಿ ಆರೋಪಿಗಳು ಇರುವ ಖಚಿತ ಮಾಹಿತಿ ಪಡೆದುಕೊಂಡು ವೃತ್ತ ನಿರೀಕ್ಷಕ ಡಿಆರ್ ಪ್ರಕಾಶ್ ನೇತ್ರತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಇದನ್ನೂ ಓದಿ:  ಹಾರ್ಟ್ ಇಮೋಜಿ ಕಳುಹಿಸಿದ್ರೆ 20 ಲಕ್ಷ ದಂಡ

MONEY

ಬೆಂಗಳೂರು ಪೂರ್ವ ತಾಲೂಕಿನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ.

Comments

Leave a Reply

Your email address will not be published. Required fields are marked *