ಟಿ20 ಸರಣಿಯಿಂದ ಕೆ.ಎಲ್ ರಾಹುಲ್ ಔಟ್ – ಪಂತ್‍ಗೆ ಒಲಿದ ನಾಯಕತ್ವ

ಮುಂಬೈ: ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವೆ ನಾಳೆಯಿಂದ ಆರಂಭವಾಗಬೇಕಾಗಿದ್ದ ಟಿ20 ಸರಣಿ ಆರಂಭಕ್ಕೂ ಮುನ್ನ ಗಾಯಾಳುವಾಗಿ ನಾಯಕ ಕೆ.ಎಲ್ ರಾಹುಲ್ ಸರಣಿಯಿಂದ ಹೊರಬಿದ್ದಿದ್ದಾರೆ.

ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿರುವುದರಿಂದ ತಂಡವನ್ನು ಮುನ್ನಡೆಸುವ ಹೊಣೆ ಕೆ.ಎಲ್ ರಾಹುಲ್‍ಗೆ ಹೊರಿಸಲಾಗಿತ್ತು. ಆದರೆ ಸರಣಿ ಆರಂಭಕ್ಕೂ ಮುನ್ನ ರಾಹುಲ್ ಗಾಯಾಳುವಾಗಿ ಸರಣಿಯಿಂದಲೇ ಹೊರ ನಡೆದಿದ್ದಾರೆ. ಇದನ್ನೂ ಓದಿ: ನೂತನ ದಾಖಲೆಯತ್ತ ಕಣ್ಣಿಟ್ಟ ಟೀಂ ಇಂಡಿಯಾ

ರಾಹುಲ್ ಮತ್ತು ಕುಲ್‍ದೀಪ್ ಯಾದವ್ ಗಾಯಾಳುವಾಗಿರುವುದರಿಂದ ತಂಡದಿಂದ ಹೊರ ನಡೆದಿದ್ದು, ರಿಷಬ್ ಪಂತ್‍ಗೆ ನಾಯಕತ್ವ ನೀಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ಮಿಥಾಲಿ ರಾಜ್

ಈಗಾಗಲೇ ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ರಾಹುಲ್ ಗಾಯಾಳುವಾಗಿರುವುದರಿಂದ ಪಂತ್ ನಾಯಕನಾದರೆ, ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿ ಆರಂಭಗೊಳ್ಳಲಿದೆ.

Comments

Leave a Reply

Your email address will not be published. Required fields are marked *