ಪತ್ನಿಯೊಂದಿಗೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದ ಟೀಂ ಇಂಡಿಯಾ ಸ್ಟಾರ್‌ ಕೆ.ಎಲ್‌ ರಾಹುಲ್

ಚಿಕ್ಕಬಳ್ಳಾಪುರ: ಟೀಂ ಇಂಡಿಯಾ (Team India) ಸ್ಟಾರ್‌ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್ ರಾಹುಲ್ (KL Rahul) ಶನಿವಾರ ಪತ್ನಿಯೊಂದಿಗೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮಧ್ಯಾಹ್ನ 12:45ರ ಸುಮಾರಿಗೆ ಪತ್ನಿ ಅತಿಯಾಶೆಟ್ಟಿ ಜೊತೆ ಆಗಮಿಸಿದ ರಾಹುಲ್ ದೇವರ ದರ್ಶನ ಪಡೆದು ವಾಪಸಾಗಿದ್ದಾರೆ. ಇನ್ನೂ ಕೆ.ಎಲ್ ರಾಹುಲ್ ಸುಬ್ರಮಣ್ಯ ಸ್ವಾಮಿಯ ಭಕ್ತರು. ಈ ಹಿಂದೆಯೂ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ (Ghati Subramanya Temple) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದನ್ನೂ ಓದಿ: ಏಷ್ಯಾಕಪ್‍ನಲ್ಲಿಂದು ಟೀಂ ಇಂಡಿಯಾ, ಪಾಕ್ ಹಣಾಹಣಿ- ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳ ಕಾತರ

ಸದ್ಯ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿರುವ ರಾಹುಲ್‌ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದರೆ, ಭಾರತ ಮತ್ತು ಪಾಕಿಸ್ತಾನ ಹಾಗೂ ಭಾರತ ಮತ್ತು ನೇಪಾಳ ನಡುವಿನ ಪಂದ್ಯಗಳಿಗೆ ಗೈರಾಗಲಿದ್ದು, ನಂತರ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕಿಂಗ್‌ ಕೊಹ್ಲಿ ಕಟ್ಟಿಹಾಕಲು ಬಾಬರ್‌ ಬಳಿ ಇದೆಯಾ ಮಾಸ್ಟರ್‌ ಪ್ಲ್ಯಾನ್‌? – ಇಬ್ಬರಲ್ಲಿ ಯಾರು ಬೆಸ್ಟ್‌?

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]