ಅರೆಸ್ಟ್ ಆಗಿದ್ರೂ ಠಾಣೆಯಿಂದ ಪರಾರಿ – ಚೇಸ್ ಮಾಡಿ ರೇಪ್ ಆರೋಪಿಗೆ ಪೊಲೀಸರ ಲಾಠಿ ಏಟು

ಕೋಲಾರ: ತಿಂಡಿ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಲಾಠಿ ಮೂಲಕ ಏಟು ನೀಡಿದ ಘಟನೆ ಕೋಲಾರದ ಗಡಿ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆರೋಪಿಯನ್ನ ಜನರ ಮುಂದೆಯೇ ಲಾಠಿಗಳಿಂದ ಥಳಿಸುವ ಮೂಲಕ ಅತ್ಯಾಚಾರಿ ಆರೋಪಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಕೋಲಾರ ಗಡಿಭಾಗದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕಲ್ಲಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಪ್ರಾಪ್ತೆ ಬಾಲಕಿಗೆ ತಿಂಡಿ ಆಸೆ ತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿರುವ ಆರೋಪಿ ಬಾಲಕಿ ಮೇಲೆ ಆತ್ಯಾಚಾರವೆಸಗಿ ಪರಾರಿಯಾಗಲು ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದ ಪರಾರಿಯಾದ ಆರೋಪಿಯನ್ನು ಸ್ಥಳೀಯರು ಚೇಸ್ ಮಾಡಿ ಮತ್ತೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಸಿಗುತ್ತಿದಂತೆ ಪಾದಗಳಿಗೆ ಪೊಲೀಸರು ಮನಬಂದಂತೆ ಥಳಿಸಿದ್ದು, ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಮೂಲದ ವೀರಭದ್ರಪ್ಪ ಆತ್ಯಾಚಾರವೆಸಗಿರುವ ಆರೋಪಿಯಾಗಿದ್ದು, ಸದ್ಯ ಆಂಧ್ರದ ಕಲ್ಲಕೇರಿಯಲ್ಲಿರುವ ಅಜ್ಜಿ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಕಲ್ಲಕೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *