ಮೂರೇ ತಿಂಗಳಲ್ಲಿ ಚಿಕ್ಕ ತಿರುಪತಿಯ ಹುಂಡಿಯಲ್ಲಿ ಸಂಗ್ರಹವಾಯ್ತು ದಾಖಲೆ ಮೊತ್ತದ ಹಣ

ಕೋಲಾರ: ಜಿಲ್ಲೆಯ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ಸ್ವಾಮಿ ಮೂರೇ ತಿಂಗಳಲ್ಲಿ ದೇವಾಲಯದ ಹುಂಡಿಯಲ್ಲಿ ನಗದು, ಚಿನ್ನಾಭರಣ ಸೇರಿದಂತೆ ಸುಮಾರು ಮೂರು ಕೋಟಿ ರೂ. ಅಧಿಕ ಮೊತ್ತ ಸಂಗ್ರಹವಾಗಿದೆ.

ಜಿಲ್ಲೆ ಮಾಲೂರು ತಾಲ್ಲೂಕು ಚಿಕ್ಕತಿರುಪತಿಯಲ್ಲಿರುವ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯ ಹೆಚ್ಚು ಪ್ರಸಿದ್ಧಿಯಾಗಿರುವ ದೇವಾಲಯವಾಗಿದೆ. ಜಿಲ್ಲೆ ವಿವಿಧ ಭಾಗ, ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ.

ಇಂದು ಮೂರು ತಿಂಗಳಲ್ಲಿ ಸಂಗ್ರಹವಾಗಿರುವ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಗಿದ್ದು, 46,07,247 ರೂ. ನಗದು, 50 ಗ್ರಾಂ ಚಿನ್ನಾಭರಣ, 347 ಗ್ರಾಂ ಬೆಳ್ಳಿ, ವಿದೇಶಿ ಕರೆನ್ಸಿ ಸಂಗ್ರಹವಾಗಿದೆ. ಕಳೆದ ವರ್ಷ ದೇವಾಲಯದ ಹುಂಡಿಯಲ್ಲಿ 1.62 ಕೋಟಿ ರೂಪಾಯಿ ಸಂಗ್ರಹವಾಗಿತ್ತು.

ಪ್ರೇಮ ನಿವೇದನೆ: ಹುಂಡಿ ಎಣಿಕೆ ಕಾರ್ಯದ ವೇಳೆ ಯುವತಿಯೊಬ್ಬರು ತನ್ನ ಪ್ರೇಮ ಕುರಿತು ಪತ್ರ ಬರೆದಿದ್ದು, ತಾನು ಗಣೇಶ್ ಎಂಬಾತನನ್ನು ಕಳೆದ ಎಂಟು ವರ್ಷಗಳಿಂದ ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೇನೆ. ಯಾವುದೇ ತೊಂದರೆ ಆಗದೆ ನಿನ್ನ ಸನ್ನಿಧಿಯಲ್ಲೇ ನಮ್ಮಿಬ್ಬರ ಮದುವೆ ಮಾಡಿಸು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *