ವೈದ್ಯರ ಮೇಲೆ ಹಲ್ಲೆ – ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಬಂದ್

ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ.

ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ರೋಗಿಯ ಸಂಬಂಧಿಕರು ವೈದ್ಯ ಡಾ.ಅರ್ಜುನ್ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಸಂಬಂಧ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ಖಂಡಿಸಿ ಇಂದು ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಶಾಪ್ ಗಳನ್ನು ಬಂದ್ ಮಾಡಿ ಸಿಬ್ಬಂದಿ ಪ್ರತಿಭಟಿಸಲಿದ್ದಾರೆ.

Comments

Leave a Reply

Your email address will not be published. Required fields are marked *