ಯಾವ ದೇಶವೂ ಮಾಡದ ಪ್ರಯತ್ನ ನಾವು ಮಾಡಿದ್ದೇವೆ- ವಿಜ್ಞಾನಿಗಳಿಗೆ ವಿದ್ಯಾರ್ಥಿಗಳು ಸೆಲ್ಯೂಟ್

ಕೊಪ್ಪಳ: ಚಂದಿರನ ಅಂಗಳದಲ್ಲಿ ವಿಕ್ರಮ ಲ್ಯಾಂಡರ್ ಸಂಪರ್ಕ ಕಡಿತ ಹಿನ್ನೆಲೆ ಕೊಪ್ಪಳದ ವಿದ್ಯಾರ್ಥಿಗಳು ವಿಜ್ಞಾನಿಗಳ ಪ್ರಯತ್ನಕ್ಕೆ ಸೆಲ್ಯೂಟ್ ಹೊಡೆದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಗಂಗಾವತಿಯ ರಾಘವೇಂದ್ರ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಇಂದು ಶಾಲೆ ಆರಂಭಕ್ಕೂ ಮುನ್ನ ವಿಜ್ಞಾನಿಗಳ ಪ್ರಯತ್ನಕ್ಕೆ ಜಯಘೊಷಣೆ ಮೊಳಗಿಸಿದ್ದಾರೆ. ಇದು ನಮ್ಮ ವಿಫಲವಲ್ಲ. ಚಂದಿರನ ದಕ್ಷಿಣ ಧ್ರುವಕ್ಕೆ ಉಪಗ್ರಹ ಉಡಾವಣೆ ಮಾಡುವ ಸಾಹಸಕ್ಕೆ ಜಗತ್ತಿನ ಮುಂದುವರಿದ ಯಾವ ದೇಶ ಕೈ ಹಾಕಿರಲಿಲ್ಲ. ಇವತ್ತು ನಮ್ಮ ದೇಶ ಆ ಒಂದು ಸಾಹಸಕ್ಕೆ ಕೈ ಹಾಕಿದೆ. ಯಶಸ್ಸು ಸಿಗದೆ ಇರಬಹುದು ಆದರೆ ನಮ್ಮ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ ಎಂದು ವಿದ್ಯಾರ್ಥಿಗಳು, ಶಿಕ್ಷಕರು ಸ್ವಾಭಿಮಾನದಿಂದ ಹೇಳಿದ್ದಾರೆ.

ಅಷ್ಟೇ ಅಲ್ಲದೆ ನಮ್ಮ ದೇಶದ ವಿಜ್ಞಾನಿಗಳ ಜೊತೆ ವಿದ್ಯಾರ್ಥಿಗಳಾದ ನಾವು ಇದ್ದೇವೆ. ಮತ್ತೆ ಪ್ರಯತ್ನಿಸೋಣ ಆ ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಮುಂದಿನ ಉಡಾವಣೆಯ ಜಯ ನಮ್ಮದಾಗಲಿ ಎಂದು ದೇವರಲ್ಲಿ ಬೇಡಿಕೊಂಡರು. ನಿಮ್ಮ ಪ್ರಯತ್ನಕ್ಕೆ ನಮ್ಮದೊಂದು ಸಲಾಂ ಎಂದು ಹೇಳುವ ಮೂಲಕ ವಿಜ್ಞಾನಿಗಳಿಗೆ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದರು.

Comments

Leave a Reply

Your email address will not be published. Required fields are marked *