ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಅಜ್ಜ-ಮೊಮ್ಮಗಳ ರಕ್ಷಣೆ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಅಜ್ಜ ಹಾಗೂ ಮೊಮ್ಮಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಗಂಗಾವತಿ ತಾಲೂಕಿನ ಸಾಣಾಪೂರ ನಿವಾಸಿಗಳಾದ ಅಜ್ಜ ಹುಲಗಪ್ಪ ಮತ್ತು ಮೊಮ್ಮಗಳಾದ ಲಾವಣ್ಯಳನ್ನು ಸ್ಥಳೀಯರು ಕಾಪಾಡಿದ್ದಾರೆ. ಹುಲಗಪ್ಪ ಅವರು ತಮ್ಮ ಬೈಕಿನಲ್ಲಿ ಮೊಮ್ಮಗಳನ್ನು ಕರೆದುಕೊಂಡು ನದಿ ನೋಡಲು ಹೋಗುತ್ತಿದ್ದರು. ಈ ವೇಳೆ ರಸ್ತೆಯಲ್ಲೇ ಹರಿಯುತ್ತಿದ್ದ ಅಪಾರ ಪ್ರಮಾಣದ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ.

ಕೆಲ ದೂರದಲ್ಲಿ ಕೊಚ್ಚಿ ಹೋಗುತ್ತಿರುವ ಅಜ್ಜ ಹಾಗೂ ಆತನ ಮೊಮ್ಮಗಳನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಕೊನೆಗೂ ಅಜ್ಜ, ಮೊಮ್ಮಗಳನ್ನು ರಕ್ಷಿಸುವ ಮೂಲಕ ಅಪಾಯದಿಂದ ಪಾರು ಮಾಡಿದ್ದಾರೆ.

Comments

Leave a Reply

Your email address will not be published. Required fields are marked *