ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದೆಹಲಿಯಲ್ಲಿ ಮುನಿಯಪ್ಪ ಲಾಬಿ!

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಂಸದ ಮುನಿಯಪ್ಪ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಅಶೋಕ್ ಗೆಹ್ಲೋಟ್ ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಸದರಿಗೆ ಕೆಪಿಸಿಸಿ ಸ್ಥಾನ ನೀಡಬೇಕು. ದಲಿತ ಸಮುದಾಯದಿಂದ ನನಗೆ ಅವಕಾಶ ನೀಡಿದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಲಾಭವಾಗಲಿದೆ. ಅಲ್ಲದೆ ವಿಧಾನಸಭೆ ಚುನಾವಣೆಯಲ್ಲೂ ದಲಿತ ಎಡ ಪಗಂಡದಿಂದ ಹೆಚ್ಚು ಸ್ಥಾನ ಕೊಡಿಸಿದ್ದೇನೆ. ಹಾಗಾಗಿ ನನ್ನನ್ನು ಕೆಪಿಸಿಸಿ ಹುದ್ದೆಗೆ ಪರಿಗಣಿಸಿ ಹೈಕಮಾಂಡ್ ತಮ್ಮ ಹೆಸರನ್ನು ಶಿಫಾರಸು ಮಾಡುವಂತೆ ಮುನಿಯಪ್ಪ ಉಭಯ ನಾಯಕರಿಗೆ ಮನವರಿಕೆ ಮಾಡಿದ್ದಾರೆ.

ಪಕ್ಷದ ನಾಯಕರ ಭೇಟಿ ಬಳಿಕ ಮಾತನಾಡಿದ ಅವರು, ನಾನು ಪ್ರಬಲ ಆಕಾಂಕ್ಷಿ ಆಗಿದ್ದು, ಹೈಕಮಾಂಡ್ ನಿರ್ಣಯ ಅಂತಿಮ. ಕೆಪಿಸಿಸಿಗೆ ಯಾರನ್ನೇ ಆಯ್ಕೆ ಮಾಡಿದರೂ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಬಹಿರಂಗ ಹೇಳಿಕೆ ನೀಡಿದ್ದ ಸಂಸದರು, ಅವಕಾಶ ಕೊಟ್ಟರೆ ಲೋಕಸಭೆಗೆ ಸ್ಪರ್ಧೆ ಮಾಡದೇ ಕೆಪಿಸಿಸಿ ಅಧ್ಯಕ್ಷ ನಾಗಿ ಕೆಲಸ ಮಾಡುತ್ತೇನೆ. ಕೆಪಿಸಿಸಿ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ. ಕಳೆದ ಸಂಸದರ ಸಭೆಯಲ್ಲಿ ಕೆಲವರು ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಸೂಚಿಸಿದ್ದರು. ನನಗೆ ಅವಕಾಶ ನೀಡಿದರೆ ಸಮರ್ಥವಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ ಸೋನಿಯಾ ಗಾಂಧಿ ಎರಡು ಬಾರಿ ನನ್ನ ಹೆಸರು ಸೂಚಿಸಿದ್ದರೂ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ನಲ್ಲಿ ಎಲ್ಲರಿಗೂ ಅವಕಾಶ ನೀಡುತ್ತಾರೆ. ನನ್ನ ಹೊರತು ಪಡಿಸಿ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೂ ವಿರೋಧ ಇಲ್ಲ. ಬಿ.ಕೆ ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರಿಗೆ ಅವಕಾಶ ಕೊಟ್ಟರೂ ಅಭ್ಯಂತರ ಇಲ್ಲ ಎಂದು ತಿಳಿಸಿದ್ದರು.

Comments

Leave a Reply

Your email address will not be published. Required fields are marked *