ರೇವಣ್ಣ ಸತ್ತಿದ್ರೆ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗ್ತಿದ್ರಂತೆ: ಈಶ್ವರಪ್ಪ

ಬಾಗಲಕೋಟೆ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಾವಿನ ವಿಚಾರವಾಗಿ ಮಾತನಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರವಾಗಿ ಸುಮಲತಾ ಅಂಬರೀಶ್ ಅವರನ್ನು ಟೀಕಿಸಿದ್ದ ಸಚಿವ ರೇವಣ್ಣ ವಿರುದ್ಧ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಸಚಿವರು ಮಾತನಾಡಿದರು ಎಂದು ನೀವು ಮಾತನಾಡಿದ್ದು ಎಷ್ಟು ಸರಿ. ಅಂತೆ-ಕಂತೆ ಕಟ್ಟಿಕೊಂಡು ಹೇಳಿಕೆ ನೀಡುವುದು ಸರಿಯಲ್ಲ ಎಂದು ಜನರು ಈಶ್ವರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಈಶ್ವರಪ್ಪ ಹೇಳಿದ್ದೇನು?:
ಪತಿ ಅಂಬರೀಶ್ ಸತ್ತು ಎರಡು ತಿಂಗಳಾಗಿಲ್ಲ ಆಗಲೇ ಸುಮಲತಾ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದಾಗ ಮಂಡ್ಯದ ವ್ಯಕ್ತಿಯೊಬ್ಬ ಖಡಕ್ ಉತ್ತರ ನೀಡಿದ. ಆ ವ್ಯಕ್ತಿಯ ಮಾತನ್ನು ನಿಮ್ಮ ಮುಂದೆ ಹೇಳಲು ನನಗೆ ಸಂಕೋಚವಾಗುತ್ತದೆ. ಆದರೂ ಹೇಳುತ್ತೇನೆ.

ಸಚಿವ ರೇವಣ್ಣ ಸತ್ತಿದ್ದರೆ ಮಾರನೇ ದಿನವೇ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗುತ್ತಿದ್ದರು ಎಂದು ಆ ವ್ಯಕ್ತಿ ಹೇಳಿದ. ಹೀಗೆ ಅನಿಸಿಕೊಳ್ಳಲು ರೇವಣ್ಣ ಅವರು ಸುಮಲತಾ ಅವರ ಬಗ್ಗೆ ಮಾತನಾಡಬೇಕಿತ್ತಾ ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *