3 ದಿನಗಳ ಹಿಂದೆ ಝೀರೋ ಟ್ರಾಫಿಕ್ – ಇಂದು ಮಾಜಿ ಸಿಎಂಗೆ ಟ್ರಾಫಿಕ್ ಬಿಸಿ

ಬೆಂಗಳೂರು: ಮೂರು ದಿನಗಳ ಹಿಂದೆ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಟ್ರಾಫಿಕ್‍ನಲ್ಲಿ ಸಿಲುಕಿಕೊಂಡಿದ್ದರು.

ಮಾಜಿ ಸಿಎಂ ಕುಮಾರಸ್ವಾಮಿ ಅವರು ಗೃಹ ಕಚೇರಿ ಕೃಷ್ಣದ ಮುಂದೆಯೇ ಟ್ರಾಫಿಕ್‍ಗೆ ಸಿಲುಕಿದ್ದರು. ಕುಮಾರಸ್ವಾಮಿ ಅವರು ಎಸ್.ಎಂ.ಕೃಷ್ಣ ನಿವಾಸದಿಂದ ತಾಜ್ ಹೋಟೆಲಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಗೃಹ ಕಚೇರಿ ಕೃಷ್ಣ ಮುಂದೆ ಸುಮಾರು 10 ನಿಮಿಷಗಳ ಕಾಲ ಟ್ರಾಫಿಕ್‍ನಲ್ಲಿ ಸಿಲುಕಿದ್ದರು.

ಉದ್ಯಮಿ ಸಿದ್ಧಾರ್ಥ್ ಅವರು ಸೋಮವಾರ ಸಂಜೆಯಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರ ನಿವಾಸಕ್ಕೆ ಹೋಗಿದ್ದು, ಅವರನ್ನು ಮಾತನಾಡಿಸಿಕೊಂಡು ವಾಪಸ್ ಹೋಗುತ್ತಿದ್ದಾಗ ಟ್ರಾಫಿಕ್‍ನಲ್ಲಿ ಸಿಲುಕಿದ್ದರು.

ಕೊನೆಗೆ ಟ್ರಾಫಿಕ್ ಜಾಮ್‍ನಲ್ಲೇ ಕುಮಾರಸ್ವಾಮಿ ಮುಂದೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ ಧೈರ್ಯ ಹೇಳಿ ವಾಪಸ್ ತೆರಳಿದ್ದಾರೆ.

Comments

Leave a Reply

Your email address will not be published. Required fields are marked *