ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಸಡಗರ – ಬಣ್ಣ ಬಣ್ಣದ ಬೆಳಕಿನ ಚಿತ್ತಾರ

ಮಂಗಳೂರು: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಜೋರಾಗಿದೆ. ಐದು ದಿನಗಳ ದೀಪಗಳ ಉತ್ಸವಕ್ಕೆ ಧರ್ಮಸ್ಥಳದಲ್ಲಿ ಚಾಲನೆ ದೊರತಿದ್ದು, ಕ್ಷೇತ್ರದ ಪರಿಸರ ಝಗಮಗಿಸುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುತ್ತಾನೆ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ.

ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ ಸಮ್ಮೇಳನವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉದ್ಘಾಟನೆ ಮಾಡಲಿದ್ದಾರೆ.

ನವೆಂಬರ್ 17 ರಂದು ಸಾಹಿತ್ಯ ಸಮ್ಮೇಳ ಆರಂಭವಾಗಲಿದ್ದು ಬರಹಗಾರ್ತಿ ಸುಧಾ ಮೂರ್ತಿ ಅವರು ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಈ ಅದ್ಭುತ ಕ್ಷಣಗಳಿಗೆ ಧರ್ಮಸ್ಥಳ ಸಾಕ್ಷಿಯಾಗುತ್ತಿದೆ.

 

Comments

Leave a Reply

Your email address will not be published. Required fields are marked *