ನಾನು ವಿಪಕ್ಷ ಶಾಸಕಿ ಅನ್ನಿಸಿಲ್ಲ, ಬೊಮ್ಮಾಯಿ, BSYಗೆ ನಮಸ್ಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ: ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ರಾಜ್ಯ ಬಿಜೆಪಿ ಸರ್ಕಾರವನ್ನು ಕೊಂಡಾಡಿದ್ದಾರೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಗುಣಗಾನ ಮಾಡಿದರು. ನಾನು ವಿರೋಧ ಪಕ್ಷದ ಶಾಸಕಿ ಅಂತ ನನಗೆ ಅನ್ನಿಸಿಲ್ಲ ಎಂದು ಹೇಳಿದರು.

ನಿಮ್ಮ ಪಾದಕ್ಕೆ ನಮಸ್ಕಾರ: ಜನಪ್ರಿಯ ಮುಖ್ಯಮಂತ್ರಿ ಬೊಮ್ಮಾಯಿ ಎಂದು ತಮ್ಮ ಭಾಷಣದಲ್ಲಿ ಹೇಳಿದ ಹೆಬ್ಬಾಳ್ಕರ್, ಅಧಿವೇಶನ ನಡೆಯುತ್ತಿದ್ದರೂ ನಮ್ಮ‌ ಕ್ಷೇತ್ರಕ್ಕೆ ಬಂದು ಸಮಯ ಕೊಟ್ಟಿದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ‌ ಪಾದಗಳಿಗೆ ಮುಟ್ಟಿ ನಮಸ್ಕಾರ ಮಾಡ್ತೀನಿ. ನಿಮ್ಮ ಕಾಳಜಿ ಹೀಗೆ ಇರಲಿ ಎಂದು ಹೆಬ್ಬಾಳ್ಕರ್‌ ಮನವಿ ಮಾಡಿದರು. ಇದನ್ನೂ ಓದಿ: ಮಹಿಳಾ ಗಾರ್ಮೆಂಟ್ಸ್ ನೌಕರರಿಗೆ ಗುಡ್ ನ್ಯೂಸ್ – ಉಚಿತ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

ಇನ್ನಷ್ಟು ಸಹಾಯ ಮಾಡಿ: ಸುವರ್ಣ ಸೌಧ ಇರುವ ಬೆಳಗಾವಿಯ ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಬೆಳಗಾವಿ ಎರಡನೇ ರಾಜಧಾನಿ ಆಗಿದ್ದರೂ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇದೆ. ನನ್ನ ಕ್ಷೇತ್ರದ ಕೆಲಸಕ್ಕೆ ಫಂಡ್ ಸಿಕ್ಕಿದೆ. ಯಡಿಯೂರಪ್ಪ ಸರ್ಕಾರ ಇದ್ದಾಗ್ಲೂ ಅಷ್ಟೇ, ಬೊಮ್ಮಾಯಿಯವರ ಸರ್ಕಾರವಿದ್ದಾಗ್ಲೂ ಅಷ್ಟೇ ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್‌, ನನ್ನ ಕ್ಷೇತ್ರದ ಕೆರೆ ತುಂಬಿಸುವ ಕೆಲಸಕ್ಕೆ ಸಹಾಯ ಮಾಡಿ ಎಂದು ವೇದಿಕೆಯಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಡಿಕೆಶಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಕೆ.ಎಸ್ ಈಶ್ವರಪ್ಪ

Comments

Leave a Reply

Your email address will not be published. Required fields are marked *