ಹಾಸನಾಂಬೆ ದರ್ಶನಕ್ಕೆ ಇಂದು ತೆರೆ- ಕೊಂಡ ಹಾಯುವಾಗ ಎಡವಿದ ಭಕ್ತನ ರಕ್ಷಣೆ

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯ ಹಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ ಬಿದ್ದಿದ್ದು, ಈ ಮಧ್ಯೆ ಭಾರೀ ಅನಾಹುತವೊಂದು ತಪ್ಪಿದೆ.

ದೇವಾಲಯದ ಮುಂದೆ ಕೊಂಡ ಹಾಯುವ ವೇಳೆ ತಲೆ ಮೇಲೆ ದೇವಿ ಉತ್ಸವ ಮೂರ್ತಿ ಹೊತ್ತಿದ್ದ ಭಕ್ತ ಎಡವಿದ್ದಾರೆ. ಅದೃಷ್ಟವಶಾತ್ ಜೊತೆಗಿದ್ದ ಭಕ್ತರು ಅವರನ್ನು ಹಾಗೂ ದೇವಿ ಉತ್ಸವ ಮೂರ್ತಿಯನ್ನು ಕೆಳಗೆ ಬೀಳದಂತೆ ತಡೆದು ಅಪಾಯದಿಂದ ಪಾರು ಮಾಡಿದ್ದಾರೆ. ಈ ಮೂಲಕ ಸ್ವಲ್ಪದರಲ್ಲೀ ಭಾರೀ ಅನಾಹುತವೊಂದು ತಪ್ಪಿದೆ.

ಇಂದು ಬೆಳಗ್ಗೆ 6 ಗಂಟೆಗೆ ಹಾಸನಾಂಬೆ ದರ್ಶನಕ್ಕೆ ತೆರೆ ಬಿದ್ದಿದೆ. ಮಧ್ಯಾಹ್ನ 1.30ಕ್ಕೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ಮುಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನಡೆಯುತ್ತಿತ್ತು. ಈ ವೇಳೆ ಕೊಂಡ ಹಾಯುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಶುಕ್ರವಾರ ಅಂತಿಮ ದಿನವಾಗಿತ್ತು. ಹೀಗಾಗಿ ನಿನ್ನೆ ಬೆಳಗ್ಗೆ 5 ರಿಂದ ಸಂಜೆ 5 ಮತ್ತು ರಾತ್ರಿ 9 ರಿಂದ ಇಂದು ಬೆಳಗ್ಗೆ 6 ಗಂಟೆವರೆಗೆ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿತ್ತು. ಇಂದು ಮಧ್ಯಾಹ್ನ ವಿಶ್ವರೂಪ ದರ್ಶನದ ನಂತರ ಗರ್ಭಗುಡಿಯ ಬಾಗಿಲು ಹಾಕಲಾಗುತ್ತದೆ.

ದೇವಿ ದರ್ಶನಕ್ಕೆ ಶನಿವಾರ ಕಡೇ ದಿನವಾಗಿರುವ ಹಿನ್ನೆಲೆಯಲ್ಲಿ ಜನಸಾಗರವೇ ದೇಗುಲಕ್ಕೆ ಹರಿದು ಬಂದಿತ್ತು. ಭಕ್ತರ ಸಾಮಾನ್ಯ ದರ್ಶನದ ಸಾಲು 2 ಕಿಲೋ ಮೀಟರ್ ಗೂ ಹೆಚ್ಚಿತ್ತು. ದೇವಿಯ ವಿಶೇಷ ದರ್ಶನದ 300 ರೂ. ಪಾಸ್ ಹಾಗೂ 1000 ರೂ. ಪಾಸ್ ಗೂ ಭಾರೀ ಬೇಡಿಕೆ ಇತ್ತು. ದೇವಿ ದರ್ಶನದ ಕೊನೆಯ ದಿನವಾದ ನಿನ್ನೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಶಾಸಕ ಶರವಣ ದೇಗುಲಕ್ಕೆ ಭೇಟಿ ನೀಡಿದ್ರು.

https://www.youtube.com/watch?v=Xt40GinaJsM

Comments

Leave a Reply

Your email address will not be published. Required fields are marked *