ಬಕ್ರೀದ್ ಹಬ್ಬದಲ್ಲಿ ಅನಧಿಕೃತವಾಗಿ ಗೋಹತ್ಯೆಗೆ ಮುಂದಾದ್ರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

ಕಲಬುರಗಿ: ಜಿಲ್ಲೆಯಾದ್ಯಂತ ಜುಲೈ 10 ರಂದು ಬಕ್ರೀದ್ ಹಬ್ಬ ಅಚರಿಸಲಾಗುತ್ತಿದೆ. ಹಬ್ಬದ ಹಿನ್ನೆಲೆ ಅನಧಿಕೃತವಾಗಿ ಗೋಹತ್ಯೆಗೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಯಶವಂತ್ ವಿ ಗುರುಕರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ತಮ್ಮ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಾರಣ ಗೋಹತ್ಯೆ ನಿಷೇಧಿಸಲಾಗಿದೆ. ಇನ್ನೂ ಕಾಯ್ದೆ ಉಲ್ಲಂಘನೆಯಾಗದಂತೆ ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ. ಇದನ್ನೂ ಓದಿ: ದೇಶದ ಜನರನ್ನು ಲೂಟಿ ಮಾಡಲು ನೆರವಾಗುವಂತೆ ಸಂವಿಧಾನವನ್ನು ಬರೆಯಲಾಗಿದೆ: ಸಾಜಿ ಚೆರಿಯನ್ 

ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸಲು ಎಲ್ಲ ಅಗತ್ಯ ಕ್ರಮಕೈಗೊಳ್ಳಬೇಕು. ಪೊಲೀಸ್, ಪಶುಸಂಗೋಪನಾ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ಪರಸ್ಪರ ಸಮನ್ವಯ ಸಾಧಿಸಿ ಹಬ್ಬಕ್ಕೆ 3 ದಿನಗಳ ಮುಂಚಿತವಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಅಕ್ರಮ ಸಾಗಾಣಿಕೆ ಆಗದಂತೆ ಕಣ್ಗಾವಲು ಇಡಬೇಕು ಎಂದು ತಿಳಿಸಿದ್ದಾರೆ.

ಅಕ್ರಮ ಜಾನುವಾರು ಸಾಗಣಿಕೆ ತಡೆಗಟ್ಟಲು ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರತ ಅಧಿಕಾರಿ-ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ತಾಲೂಕು ಮಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಅನಧಿಕೃತ ಪ್ರಾಣಿ ವಧೆ, ಸಾಗಟ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಕ್ರಮವೇನು?
ಅಕ್ರಮವಾಗಿ ಸಾಗಾಣಿಕೆ ಕಂಡುಬಂದಲ್ಲಿ ಕೂಡಲೇ ಗೋವುಗಳನ್ನು ವಶಪಡಿಸಿಕೊಂಡು ಸಾಗಾಣಿಕೆದಾರರ ವಿರುದ್ಧ ಎಫ್‍ಐಆರ್ ದಾಖಲಿಸುವುದು. ನಂತರ ಗೋವುಗಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿ ಗೋಶಾಲೆಗಳಿಗೆ ಹಸ್ತಾಂತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ:  ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿ ಗಿಫ್ಟ್ ಕೊಟ್ಟ ಪೊಲೀಸ್ – ವೀಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್ 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾವಹಕ ಅಧಿಕಾರಿ ಡಾ.ಗಿರೀಶ್ ಡಿ. ಬದೋಲೆ, ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ವರ ಪಾಟೀಲ್ ದೇವಿದಾಸ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ್ ತೆಗ್ಗೆಳ್ಳಿ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಕೇಶವ ಮೋಟಗಿ, ಪಶು ಸಂಗೋಪನೆ ಇಲಾಖೆಯ ತಾಂತ್ರಿಕ ಅಧಿಕಾರಿ ಡಾ.ಇಂಗಳೆ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಇದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *