ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ

ಹಾವೇರಿ: ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ಎರಗಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕಡೂರು ಗ್ರಾಮದ ಬಳಿ ನಡೆದಿದೆ.

ಶೇಖಪ್ಪ ಕಮಟಳ್ಳಿ (40) ಗಾಯಗೊಂಡ ರೈತ. ಜಮೀನಿಗೆ ನೀರು ಹಾಯಿಸಲು ತೆರಳುತ್ತಿದ್ದ ವೇಳೆ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದ್ದು, ಕಾಲು ಮತ್ತು ಮೈ, ಕೈಗೆ ಪರಚಿ ಗಾಯ ಮಾಡಿದೆ. ಶೇಕಪ್ಪ ಅವರನ್ನು ಈಗ ರಟ್ಟೀಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಬಳಿಯೇ ಚಿರತೆಗಳು ಬಿಡಾರ ಹೂಡಿವೆ. ಕಳೆದ ಎರಡ್ಮೂರು ವರ್ಷಗಳಲ್ಲಿ ಮೂರು ಚಿರತೆಗಳು ಬೋನಿಗೆ ಬಿದ್ದಿವೆ. ಚಿರತೆ ದಾಳಿಯಿಂದ ಕಡೂರು, ಕುಡುಪಲಿ, ಬುಳ್ಳಾಪುರ ಗ್ರಾಮದ ಜನರು ಆಂತಕಪಡುತ್ತಿದ್ದಾರೆ.

ಸ್ಥಳಕ್ಕೆ ಹಿರೇಕೆರೂರು ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments

Leave a Reply

Your email address will not be published. Required fields are marked *