ರಾಯಚೂರು: ಸಿಡಿಲು ಬಡಿದು ವ್ಯಕ್ತಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಯಾದಗಿರಿ/ರಾಯಚೂರು: ಕುರಿ ಮೇಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ನೀಲೊಗಲ್ ಕ್ಯಾಂಪ್ ಬಳಿ ನಡೆದಿದೆ.

ನಾಗರಾಜ್ (28) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ರಾಯಚೂರು ತಾಲೂಕಿನ ಜಂಬಲದಿನ್ನಿ ಗ್ರಾಮದ ನಿವಾಸಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಣ್ಣ ಪ್ರಮಾಣದಲ್ಲಿ ಕೂಡ ಗಾಯವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಇತ್ತ ಯಾದಗಿರಿ ಜಿಲ್ಲೆಯ ಕೆಳ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಸೇರಿದಂತೆ ಶೆಡ್‍ಗಳು ನೆಲಕಚ್ಚಿದೆ. ಗಾಳಿಯ ವೇಗಕ್ಕೆ ಮನೆಯ ಟಿನ್ ಶೆಡ್ ಹಾರಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಗಾಯಗಳುಗಳಿಗೆ ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಸುರಪುರ ನಗರದ ತಿಮ್ಮಾಪುರದ ವಡ್ಡರಗಲ್ಲಿಯಲ್ಲಿ ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ.

Comments

Leave a Reply

Your email address will not be published. Required fields are marked *