ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ- ಆರ್‍ಎಸ್‍ಎಸ್ ಪ್ರಮುಖರಿಗೆ ಮೋಹನ್ ಭಾಗವತ್ ಸೂಚನೆ

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಇದೀಗ ನೇರವಾಗಿ ಆರ್‍ಎಸ್‍ಎಸ್ ರಂಗಕ್ಕಿಳಿದಿದೆ. ಸ್ವತಂತ್ರ ಧರ್ಮದ ಬೇಡಿಕೆಯಿಂದ ಹಿಂದೆ ಸರಿಯುವಂತೆ ಲಿಂಗಾಯತ ಮಠಾಧೀಶರು ಹಾಗೂ ಮುಖಂಡರ ಮನವೊಲಿಸುವಂತೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂಘದ ಪ್ರಮುಖರಿಗೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಉತ್ತರ ಮತ್ತು ದಕ್ಷಿಣ ಕರ್ನಾಟಕ ಪ್ರಾಂತ ಬೈಠಕ್‍ನಲ್ಲಿ, ಲಿಂಗಾಯತ ಸ್ವತಂತ್ರ ಧರ್ಮದ ಕುರಿತ ವಿದ್ಯಮಾನಗಳ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

ವೀರಶೈವರು ಮತ್ತು ಲಿಂಗಾಯತರ ನಡುವೆ ಸಹಮತ ಮೂಡಿಸಬೇಕು. ಅವರು ಒಗ್ಗಟ್ಟಿನಿಂದ ಇರುವ ಹಾಗೆ ನೋಡಿಕೊಳ್ಳಬೇಕು. ಇದು ರಾಜಕೀಯ ಹಾಗೂ ಧಾರ್ಮಿಕವಾಗಿಯೂ ಪ್ರಮುಖವಾದ ಕೆಲಸ. ಹಿಂದುಳಿದವರ ಕಲ್ಯಾಣ ಕಾರ್ಯಕ್ರಮಗಳಿಗೆ ಸಂಘದ ಕಾರ್ಯಕರ್ತರು ಹೆಚ್ಚಿನ ಒತ್ತು ನೀಡಬೇಕು. ಅನ್ಯಾಯವಾದರೆ ತಕ್ಷಣ ಸ್ಪಂದಿಸಬೇಕು ಎಂದು ಮೋಹನ್ ಭಾಗವತ್ ಕರೆ ನೀಡಿದ್ರು ಎಂದು ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *