ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಸಂಪೂರ್ಣ ಬೆಂಬಲ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ವೀರಶೈವ ಪದದ ಅರ್ಥ ನನಗೆ ಗೊತ್ತಿಲ್ಲ, ಗೊತ್ತಿರುವ ಭೀಮಣ್ಣ ಖಂಡ್ರೆ, ಶಾಮನೂರ ಶಿವಶಂಕ್ರಪ್ಪ ಇದರ ಅರ್ಥ ಹೇಳಲಿ ಎಂದು ವ್ಯಂಗ್ಯವಾಡಿದರು.

ಸ್ವಾಮಿಗಳು ಈ ಕುರಿತು ಮಾತನಾಡುವುದನ್ನು ನಿಲ್ಲಿಸಲಿ. ಲಿಂಗಾಯತ ಪ್ರತ್ಯೇಕ ಧರ್ಮವಾದ್ರೆ ಧಾರ್ಮಿಕ ಅಲ್ಪಸಂಖ್ಯಾತ ಮನ್ನಣೆ ದೊರೆಯಲಿದೆ. ಇದರಿಂದ ಸಮಾಜದ ಕೆಳ ಸ್ಥರದ ಜನರಿಗೆ ಅನುಕೂಲವಾಗಲಿದೆ. ಹೀಗಾಗಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ವಿರೋಧ ಬೇಡ ಎಂದರು.

Comments

Leave a Reply

Your email address will not be published. Required fields are marked *